ಕಾವೇರಿ ಕಣಿವೆಯಲ್ಲಿ ಪ್ರಸಕ್ತ ವರ್ಷ ನಿರೀಕ್ಷಿತ ಮುಂಗಾರು ಸುರಿಯದ್ದರಿಂದ ಜಲಾಶಯಗಳ ಒಳಹರಿವು ಆರಂಭವಾಗಿಲ್ಲ. ಜೂನ್ 1ರಿಂದ 20ರವರೆಗೆ ಕರ್ನಾಟಕದ ಕಬಿನಿ, ಹಾರಂಗಿ, ಹೇಮಾವತಿ ಮತ್ತು ಕೃಷ್ಣರಾಜ ಸಾಗರ ಜಲಾಶಯಗಳಿಗೆ 1.77 ಟಿಎಂಸಿ ಅಡಿ ನೀರು ಹರಿದುಬಂದಿದೆ. ಇದೇ ವೇಳೆ ಬಿಳಿಗುಂಡ್ಲು ಮಾಪನ ಕೇಂದ್ರದಿಂದ ತಮಿಳುನಾಡಿಗೆ 1.88 ಟಿಎಂಸಿ ಅಡಿ ನೀರು ಹರಿದುಹೋಗಿದೆ ಎಂದು ಕೇಂದ್ರ ಜಲ ಆಯೋಗದ ಅಧ್ಯಕ್ಷರೂ ಆಗಿರುವ ಪ್ರಾಧಿಕಾರದ ಮುಖ್ಯಸ್ಥ ಎಸ್.ಮಸೂದ್ ಹುಸೇನ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.