ಈ ವಿಚಾರದ ಕಾರ್ಯಸಾಧ್ಯತಾ ವರದಿಯನ್ನು ತಮಿಳುನಾಡು ಸರ್ಕಾರ ಸೆಪ್ಟೆಂಬರ್ನಲ್ಲಿ ವಿರೋಧಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಪಳನಿಸ್ವಾಮಿ ನೆನಪಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ತಮಿಳುನಾಡಿನ ಸಹಮತ ಕೋರಬೇಕು ಎಂದು ಹಿಂದೆ ಒತ್ತಾಯಿಸಿದ್ದನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.