<p class="title"><strong>ನವದೆಹಲಿ</strong>: ವಿಮಾನನಿಲ್ದಾಣ ಉನ್ನತೀಕರಣ, ನಿರ್ವಹಣೆಕುರಿತು ನಡೆದ ₹ 705 ಕೋಟಿ ಅವ್ಯವಹಾರ ಸಂಬಂಧ ಜಿವಿಕೆ ಗ್ರೂಪ್ ಅಧ್ಯಕ್ಷ ವೆಂಕಟ ಕೃಷ್ಣ ರೆಡ್ಡಿ ಗುಣುಪತಿ ಮತ್ತು ಅವರ ಪುತ್ರನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಪುತ್ರ ಜಿ.ವಿ.ಸಂಜಯ್ ರೆಡ್ಡಿ ಮುಂಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.</p>.<p class="title">ಮುಂಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣದ (ಎಂಐಎಎಲ್) ಉನ್ನತೀಕರಣ ಮತ್ತು ಮೇಲ್ವಿಚಾರಣೆ ಸಂಬಂಧ ಜಿವಿಕೆ ಗ್ರೂಪ್ ಭಾಗವಾಗಿರುವ ಜಿವಿಕೆ ಏರ್ ಪೋರ್ಟ್ ಹೋಲ್ಡಿಂಗ್ ಲಿಮಿಟೆಡ್ ಜೊತೆಗೆ ಜಂಟಿ ಉದ್ಯಮ ಸ್ಥಾಪಿಸಿತ್ತು.</p>.<p class="title">2006ರ ಏಪ್ರಿಲ್ 4 ರಂದು ಭಾರತ ವಿಮಾನ ಪ್ರಾಧಿಕಾರವು ಎಂಐಎಎಲ್ ಜೊತೆಗೆ ಮುಂಬೈ ವಿಮಾನನಿಲ್ದಾಣದ ಆಧುನೀಕರಣ, ಮೇಲ್ವಿಚಾರಣೆ, ನಿರ್ವಹಣೆ ಕುರಿತಂತೆ ಒಡಂಬಡಿಕೆ ಮಾಡಿಕೊಂಡಿತ್ತು.</p>.<p>ಜಿವಿಕೆ ಗ್ರೂಪ್ ಸಂಸ್ಥೆಯ ಪ್ರವರ್ತಕರು ಹಾಗೂ ಎಎಐ ಅಧಿಕಾರಿಗಳ ಸಹಕಾರದಲ್ಲಿ ಭಿನ್ನ ಮಾರ್ಗಗಳಲ್ಲಿ ಹಣ ವರ್ಗಾವಣೆ, ದುರ್ಬಳಕೆಗೆ ಕಾರಣರಾಗಿದ್ದರು. ಜಿವಿಕೆ ಗ್ರೂಪ್ ಎಂಐಎಎಲ್ನ ಸುಮಾರು ₹395 ಕೋಟಿ ಮೀಸಲು ನಿಧಿಯನ್ನು ದುರ್ಬಳಕೆ ಮಾಡಿಕೊಂಡಿತ್ತು ಎಂದು ಸಿಬಿಐ ಆರೋಪಿಸಿದೆ.</p>.<p>ಎಂಎಐಎಲ್ ಸಿಬ್ಬಂದಿ ಅಲ್ಲದವರಿಗೂ ವೇತನ, ವೆಚ್ಚ ಪಾವತಿಸುವ ಮೂಲಕ ವಿಮಾನನಿಲ್ದಾಣದ ಆದಾಯಕ್ಕೆ ಧಕ್ಕೆ ತರಲಾಗಿದೆ. ಎಂಎಐಎಲ್ ನಿಧಿ ಬಳಸಿ ವೈಯಕ್ತಿಕ, ಕೌಟುಂಬಿಕ ವೆಚ್ಚವನ್ನು ನಿಭಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಈ ಇಬ್ಬರಲ್ಲದೇ ಎಂಐಎಎಲ್, ಜಿವಿಕೆ ಏರ್ ಪೋರ್ಟ್ ಹೋಲ್ಡಿಂಗ್ ಲಿಮಿಟೆಡ್ ಹಾಗೂ ಒಂಬತ್ತು ಇತರೆ ಖಾಸಗಿ ಕಂಪನಿಗಳು, ಎಎಐನ ಹಲವು ಅಧಿಕಾರಿಗಳ ವಿರುದ್ಧವೂ ಮೊಕದ್ದಮೆ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ವಿಮಾನನಿಲ್ದಾಣ ಉನ್ನತೀಕರಣ, ನಿರ್ವಹಣೆಕುರಿತು ನಡೆದ ₹ 705 ಕೋಟಿ ಅವ್ಯವಹಾರ ಸಂಬಂಧ ಜಿವಿಕೆ ಗ್ರೂಪ್ ಅಧ್ಯಕ್ಷ ವೆಂಕಟ ಕೃಷ್ಣ ರೆಡ್ಡಿ ಗುಣುಪತಿ ಮತ್ತು ಅವರ ಪುತ್ರನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಪುತ್ರ ಜಿ.ವಿ.ಸಂಜಯ್ ರೆಡ್ಡಿ ಮುಂಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.</p>.<p class="title">ಮುಂಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣದ (ಎಂಐಎಎಲ್) ಉನ್ನತೀಕರಣ ಮತ್ತು ಮೇಲ್ವಿಚಾರಣೆ ಸಂಬಂಧ ಜಿವಿಕೆ ಗ್ರೂಪ್ ಭಾಗವಾಗಿರುವ ಜಿವಿಕೆ ಏರ್ ಪೋರ್ಟ್ ಹೋಲ್ಡಿಂಗ್ ಲಿಮಿಟೆಡ್ ಜೊತೆಗೆ ಜಂಟಿ ಉದ್ಯಮ ಸ್ಥಾಪಿಸಿತ್ತು.</p>.<p class="title">2006ರ ಏಪ್ರಿಲ್ 4 ರಂದು ಭಾರತ ವಿಮಾನ ಪ್ರಾಧಿಕಾರವು ಎಂಐಎಎಲ್ ಜೊತೆಗೆ ಮುಂಬೈ ವಿಮಾನನಿಲ್ದಾಣದ ಆಧುನೀಕರಣ, ಮೇಲ್ವಿಚಾರಣೆ, ನಿರ್ವಹಣೆ ಕುರಿತಂತೆ ಒಡಂಬಡಿಕೆ ಮಾಡಿಕೊಂಡಿತ್ತು.</p>.<p>ಜಿವಿಕೆ ಗ್ರೂಪ್ ಸಂಸ್ಥೆಯ ಪ್ರವರ್ತಕರು ಹಾಗೂ ಎಎಐ ಅಧಿಕಾರಿಗಳ ಸಹಕಾರದಲ್ಲಿ ಭಿನ್ನ ಮಾರ್ಗಗಳಲ್ಲಿ ಹಣ ವರ್ಗಾವಣೆ, ದುರ್ಬಳಕೆಗೆ ಕಾರಣರಾಗಿದ್ದರು. ಜಿವಿಕೆ ಗ್ರೂಪ್ ಎಂಐಎಎಲ್ನ ಸುಮಾರು ₹395 ಕೋಟಿ ಮೀಸಲು ನಿಧಿಯನ್ನು ದುರ್ಬಳಕೆ ಮಾಡಿಕೊಂಡಿತ್ತು ಎಂದು ಸಿಬಿಐ ಆರೋಪಿಸಿದೆ.</p>.<p>ಎಂಎಐಎಲ್ ಸಿಬ್ಬಂದಿ ಅಲ್ಲದವರಿಗೂ ವೇತನ, ವೆಚ್ಚ ಪಾವತಿಸುವ ಮೂಲಕ ವಿಮಾನನಿಲ್ದಾಣದ ಆದಾಯಕ್ಕೆ ಧಕ್ಕೆ ತರಲಾಗಿದೆ. ಎಂಎಐಎಲ್ ನಿಧಿ ಬಳಸಿ ವೈಯಕ್ತಿಕ, ಕೌಟುಂಬಿಕ ವೆಚ್ಚವನ್ನು ನಿಭಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>ಈ ಇಬ್ಬರಲ್ಲದೇ ಎಂಐಎಎಲ್, ಜಿವಿಕೆ ಏರ್ ಪೋರ್ಟ್ ಹೋಲ್ಡಿಂಗ್ ಲಿಮಿಟೆಡ್ ಹಾಗೂ ಒಂಬತ್ತು ಇತರೆ ಖಾಸಗಿ ಕಂಪನಿಗಳು, ಎಎಐನ ಹಲವು ಅಧಿಕಾರಿಗಳ ವಿರುದ್ಧವೂ ಮೊಕದ್ದಮೆ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>