ನವದೆಹಲಿ: ವಿಮಾನನಿಲ್ದಾಣ ಉನ್ನತೀಕರಣ, ನಿರ್ವಹಣೆಕುರಿತು ನಡೆದ ₹ 705 ಕೋಟಿ ಅವ್ಯವಹಾರ ಸಂಬಂಧ ಜಿವಿಕೆ ಗ್ರೂಪ್ ಅಧ್ಯಕ್ಷ ವೆಂಕಟ ಕೃಷ್ಣ ರೆಡ್ಡಿ ಗುಣುಪತಿ ಮತ್ತು ಅವರ ಪುತ್ರನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಪುತ್ರ ಜಿ.ವಿ.ಸಂಜಯ್ ರೆಡ್ಡಿ ಮುಂಬೈ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.