ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಸಿಬಿಐ ಸೋಮವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.ಈ ಅರ್ಜಿ ವಿಚಾರಣೆ ಮಂಗಳವಾರ ನಡೆದಿದೆ. ಸಿಬಿಐ ಪರವಾಗಿ ಕೋರ್ಟ್ ನಲ್ಲಿ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಪಶ್ಚಿಮ ಬಂಗಾಳದಲ್ಲಿ ನಡೆದ ರಾಜಕೀಯ ವಿದ್ಯಮಾನಗಳು ಸಂವಿಧಾನ ವ್ಯವಸ್ಥೆಗೆ ಧಕ್ಕೆಯುಂಟುಮಾಡಿದೆ ಎಂದಿದ್ದಾರೆ.