ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ಗೆ ವಂಚನೆ: ಏಳು ಸ್ಥಳಗಳಲ್ಲಿ ಸಿಬಿಐ ಶೋಧ

Last Updated 26 ಜೂನ್ 2020, 12:02 IST
ಅಕ್ಷರ ಗಾತ್ರ

ನವದೆಹಲಿ: ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೊಸೆರ್‌ ಬಯೇರ್ ಸೋಲಾರ್‌ ಕಂಪನಿಯ ರಾತುಲ್‌ ಪುರಿ ಮತ್ತು ಇತರರ ಕಚೇರಿ ಮತ್ತು ನಿವಾಸ ಸೇರಿದಂತೆ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದರು.

₹787 ಕೋಟಿ ವಂಚನೆಗೆ ಸಂಬಂಧಿಸಿದಂತೆ ಈ ತನಿಖೆ ನಡೆಸಲಾಗುತ್ತಿದೆ. ಮೊಸೆರ್‌ ಬಯೇರ್ ಸೋಲಾರ್‌ ಕಂಪನಿಗೆ ನೀಡಲಾದ ಸಾಲ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸಿಬಿಐ ಈ ಬಗ್ಗೆ ಗುರುವಾರ ಪ್ರಕರಣ ದಾಖಲಿಸಿಕೊಂಡಿತ್ತು. ರಾತುಲ್‌ ಪುರಿಯ ಅವರ ತಂದೆ ದೀಪಕ್‌ ಪುರಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆಯೂ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT