ಅಕ್ಟೋಬರ್ 24ರ ಬೆಳಗಿನ ಜಾವ 2 ಗಂಟೆಗೆ ದೆಹಲಿಯ ಸಿಬಿಐ ಮುಖ್ಯಕಚೇರಿಯ ಹತ್ತನೇ ಮಹಡಿಯಲ್ಲಿರುವ ಅಲೋಕ್ ವರ್ಮಾ ಅವರ ಕಚೇರಿಗೆ ಬೀಗ ಜಡಿಯಲಾಗಿತ್ತು. ಎಂ.ನಾಗೇಶ್ವರ ರಾವ್ ಅವರನ್ನು ಹಂಗಾಮಿ ಮುಖ್ಯಸ್ಥರಾಗಿ ನೇಮಿಸಿ ಸರ್ಕಾರ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದೊಂದಿಗೆ ವರ್ಮಾ ಮತ್ತೆ ತಮ್ಮ ಕಚೇರಿಗೆ ಮರಳಲು ಸಾಧ್ಯವಾಗಿದ್ದರೂ, ಅವರ ವಿರುದ್ಧದ ಆರೋಪಗಳ ಕುರಿತು ಸಿವಿಸಿ ನಡೆಸುತ್ತಿರುವ ತನಿಖೆ ಪೂರ್ಣಗೊಳ್ಳುವವರೆಗೂ, ಅವರು ಯಾವುದೇ ಹೊಸ ಮತ್ತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿದೆ.