<p><strong>ಕೋಲ್ಕತ್ತ</strong>: ಚಿಟ್ ಫಂಡ್ ಹಗರಣದಲ್ಲಿ ಕೋಲ್ಕತ್ತ ನಗರ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರ ವಿಚಾರಣೆಗೆ ಭಾನುವಾರ ಅವರ ನಿವಾಸಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳನ್ನೇ ಪೊಲೀಸರು ವಶಕ್ಕೆ ಪಡೆದ ನಾಟಕೀಯ ಮತ್ತು ಅಪರೂಪದ ಘಟನೆ ನಡೆದಿದೆ.</p>.<p>ರೋಸ್ ವ್ಯಾಲಿ, ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ಕಡತ ಮತ್ತು ದಾಖಲೆ ಕಣ್ಮರೆಯಾದ ಬಗ್ಗೆ ಪ್ರಶ್ನಿಸಲು ಸಿಬಿಐ ಅಧಿಕಾರಿಗಳ ತಂಡ ಲಂಡನ್ ಸ್ಟ್ರೀಟ್ನಲ್ಲಿರುವ ಪೊಲೀಸ್ ಕಮಿಷನರ್ ನಿವಾಸಕ್ಕೆ ತೆರಳಿತ್ತು.</p>.<p>ನಿವಾಸದ ಹೊರಗೆ ಸಿಬಿಐ ಅಧಿಕಾರಿಗಳನ್ನು ತಡೆದ ರಾಜ್ಯ ಪೊಲೀಸರು ಜೀಪಿನಲ್ಲಿ ಅವರನ್ನು ಠಾಣೆಗೆ ಕರೆದೊಯ್ದರು. ಇದರಿಂದ ಪೊಲೀಸ್ ಮುಖ್ಯಸ್ಥರ ನಿವಾಸದ ಹೊರಗೆ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು.</p>.<p><strong>* ಇದನ್ನೂ ಓದಿ:<a href="https://www.prajavani.net/stories/national/mamata-hits-streets-612156.html">ಕೇಂದ್ರದ ಧೋರಣೆ ವಿರುದ್ಧ ಮಮತಾ ಧರಣಿ</a></strong></p>.<p>ಇದರ ಬೆನ್ನಲ್ಲೇ ಕೋಲ್ಕತ್ತ ಪೊಲೀಸ್ ಅಧಿಕಾರಿಗಳ ತಂಡವೊಂದು ಸಿಜಿಒ ಕಾಂಪ್ಲೆಕ್ಸ್ನಲ್ಲಿರುವ ಸಿಬಿಐ ಕಚೇರಿಗೆ ಧಾವಿಸಿ, ವಿಚಾರಣೆ ನಡೆಸಿತು. ಈ ನಡುವೆ ಕಮಿಷನರ್ ನಿವಾಸಕ್ಕೆ ಬಂದಿಳಿದ ಸಿಬಿಐ ಅಧಿಕಾರಿಗಳ ಮತ್ತೊಂದು ತಂಡವನ್ನೂ ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ಯಲಾಯಿತು.</p>.<p class="Subhead"><strong>ಆರೋಪ–ಪ್ರತ್ಯಾರೋಪ:</strong>‘ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ’ ಎಂದು ಸಿಬಿಐ ಅಧಿಕಾರಿಗಳು ಇದಕ್ಕೂ ಮೊದಲು ಹೇಳಿದ್ದರು. ಈ ಆರೋಪವನ್ನು ಪೊಲೀಸ್ ಇಲಾಖೆ ತಳ್ಳಿ ಹಾಕಿದೆ.</p>.<p>ಕರ್ತವ್ಯದ ಮೇಲೆ ತೆರಳಿದ್ದ ಸಿಬಿಐ ಅಧಿಕಾರಿಗಳನ್ನು ಬಲವಂತವಾಗಿ ಠಾಣೆಗೆ ಕರೆದೊಯ್ದು ನಂತರ ಬಂಧಿಸಲಾಗಿದೆ ಎಂದು ಸಿಬಿಐ ಆರೋಪ ಮಾಡಿದೆ.</p>.<p>ಈ ಆರೋಪಗಳನ್ನು ತಳ್ಳಿ ಹಾಕಿರುವ ಪೊಲೀಸರು, ಸಿಬಿಐ ಅಧಿಕಾರಿಗಳ ಬಳಿ ಅಗತ್ಯ ದಾಖಲೆಗಳಿವೆಯೇ ಎಂದು ಪರಿಶೀಲಿಸಲು ಅವರನ್ನು ಠಾಣೆಗೆ ಕರೆದೊಯ್ಯಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.</p>.<p><strong>ರಾಜೀವ್ ಬೆಂಬಲಕ್ಕೆ ಮಮತಾ ಬ್ಯಾನರ್ಜಿ</strong></p>.<p>ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ವಿರೇಂದರ್ ಮತ್ತು ಎಡಿಜಿಪಿ ಅನುಜ್ ಶರ್ಮಾ ಅವರು ಕಮಿಷನರ್ ನಿವಾಸಕ್ಕೆ ಧಾವಿಸಿದರು.</p>.<p>ರಾಜೀವ್ ಕುಮಾರ್ ಅತ್ಯಂತ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ. ಅವರಿಗೆ ಒಳ್ಳೆಯ ಹೆಸರಿದೆ. ರಾಜ್ಯ ಸರ್ಕಾರ ಅವರ ಬೆನ್ನಿಗೆ ಇದೆ ಎಂದು ಮಮತಾ ಬೆಂಬಲ ವ್ಯಕ್ತಪಡಿಸಿದರು.</p>.<p>‘ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪೊಲೀಸರು ಮತ್ತು ಇತರ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಸಿಬಿಐಯನ್ನು ಬಳಸಿಕೊಳ್ಳುತ್ತಿದೆ’ ಎಂದರು.</p>.<p>ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಲು ಯತ್ನಿಸುತ್ತಿದೆ. 40 ಸಿಬಿಐ ಅಧಿಕಾರಿಗಳು ಪೊಲೀಸ್ ಕಮಿಷನರ್ ನಿವಾಸವನ್ನು ಸುತ್ತುವರಿದಿದ್ದರು ಎಂದು ಟಿಎಂಸಿ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಚಿಟ್ ಫಂಡ್ ಹಗರಣದಲ್ಲಿ ಕೋಲ್ಕತ್ತ ನಗರ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರ ವಿಚಾರಣೆಗೆ ಭಾನುವಾರ ಅವರ ನಿವಾಸಕ್ಕೆ ತೆರಳಿದ್ದ ಸಿಬಿಐ ಅಧಿಕಾರಿಗಳನ್ನೇ ಪೊಲೀಸರು ವಶಕ್ಕೆ ಪಡೆದ ನಾಟಕೀಯ ಮತ್ತು ಅಪರೂಪದ ಘಟನೆ ನಡೆದಿದೆ.</p>.<p>ರೋಸ್ ವ್ಯಾಲಿ, ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ಕಡತ ಮತ್ತು ದಾಖಲೆ ಕಣ್ಮರೆಯಾದ ಬಗ್ಗೆ ಪ್ರಶ್ನಿಸಲು ಸಿಬಿಐ ಅಧಿಕಾರಿಗಳ ತಂಡ ಲಂಡನ್ ಸ್ಟ್ರೀಟ್ನಲ್ಲಿರುವ ಪೊಲೀಸ್ ಕಮಿಷನರ್ ನಿವಾಸಕ್ಕೆ ತೆರಳಿತ್ತು.</p>.<p>ನಿವಾಸದ ಹೊರಗೆ ಸಿಬಿಐ ಅಧಿಕಾರಿಗಳನ್ನು ತಡೆದ ರಾಜ್ಯ ಪೊಲೀಸರು ಜೀಪಿನಲ್ಲಿ ಅವರನ್ನು ಠಾಣೆಗೆ ಕರೆದೊಯ್ದರು. ಇದರಿಂದ ಪೊಲೀಸ್ ಮುಖ್ಯಸ್ಥರ ನಿವಾಸದ ಹೊರಗೆ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು.</p>.<p><strong>* ಇದನ್ನೂ ಓದಿ:<a href="https://www.prajavani.net/stories/national/mamata-hits-streets-612156.html">ಕೇಂದ್ರದ ಧೋರಣೆ ವಿರುದ್ಧ ಮಮತಾ ಧರಣಿ</a></strong></p>.<p>ಇದರ ಬೆನ್ನಲ್ಲೇ ಕೋಲ್ಕತ್ತ ಪೊಲೀಸ್ ಅಧಿಕಾರಿಗಳ ತಂಡವೊಂದು ಸಿಜಿಒ ಕಾಂಪ್ಲೆಕ್ಸ್ನಲ್ಲಿರುವ ಸಿಬಿಐ ಕಚೇರಿಗೆ ಧಾವಿಸಿ, ವಿಚಾರಣೆ ನಡೆಸಿತು. ಈ ನಡುವೆ ಕಮಿಷನರ್ ನಿವಾಸಕ್ಕೆ ಬಂದಿಳಿದ ಸಿಬಿಐ ಅಧಿಕಾರಿಗಳ ಮತ್ತೊಂದು ತಂಡವನ್ನೂ ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ಯಲಾಯಿತು.</p>.<p class="Subhead"><strong>ಆರೋಪ–ಪ್ರತ್ಯಾರೋಪ:</strong>‘ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ’ ಎಂದು ಸಿಬಿಐ ಅಧಿಕಾರಿಗಳು ಇದಕ್ಕೂ ಮೊದಲು ಹೇಳಿದ್ದರು. ಈ ಆರೋಪವನ್ನು ಪೊಲೀಸ್ ಇಲಾಖೆ ತಳ್ಳಿ ಹಾಕಿದೆ.</p>.<p>ಕರ್ತವ್ಯದ ಮೇಲೆ ತೆರಳಿದ್ದ ಸಿಬಿಐ ಅಧಿಕಾರಿಗಳನ್ನು ಬಲವಂತವಾಗಿ ಠಾಣೆಗೆ ಕರೆದೊಯ್ದು ನಂತರ ಬಂಧಿಸಲಾಗಿದೆ ಎಂದು ಸಿಬಿಐ ಆರೋಪ ಮಾಡಿದೆ.</p>.<p>ಈ ಆರೋಪಗಳನ್ನು ತಳ್ಳಿ ಹಾಕಿರುವ ಪೊಲೀಸರು, ಸಿಬಿಐ ಅಧಿಕಾರಿಗಳ ಬಳಿ ಅಗತ್ಯ ದಾಖಲೆಗಳಿವೆಯೇ ಎಂದು ಪರಿಶೀಲಿಸಲು ಅವರನ್ನು ಠಾಣೆಗೆ ಕರೆದೊಯ್ಯಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.</p>.<p><strong>ರಾಜೀವ್ ಬೆಂಬಲಕ್ಕೆ ಮಮತಾ ಬ್ಯಾನರ್ಜಿ</strong></p>.<p>ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ವಿರೇಂದರ್ ಮತ್ತು ಎಡಿಜಿಪಿ ಅನುಜ್ ಶರ್ಮಾ ಅವರು ಕಮಿಷನರ್ ನಿವಾಸಕ್ಕೆ ಧಾವಿಸಿದರು.</p>.<p>ರಾಜೀವ್ ಕುಮಾರ್ ಅತ್ಯಂತ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ. ಅವರಿಗೆ ಒಳ್ಳೆಯ ಹೆಸರಿದೆ. ರಾಜ್ಯ ಸರ್ಕಾರ ಅವರ ಬೆನ್ನಿಗೆ ಇದೆ ಎಂದು ಮಮತಾ ಬೆಂಬಲ ವ್ಯಕ್ತಪಡಿಸಿದರು.</p>.<p>‘ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪೊಲೀಸರು ಮತ್ತು ಇತರ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಸಿಬಿಐಯನ್ನು ಬಳಸಿಕೊಳ್ಳುತ್ತಿದೆ’ ಎಂದರು.</p>.<p>ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಲು ಯತ್ನಿಸುತ್ತಿದೆ. 40 ಸಿಬಿಐ ಅಧಿಕಾರಿಗಳು ಪೊಲೀಸ್ ಕಮಿಷನರ್ ನಿವಾಸವನ್ನು ಸುತ್ತುವರಿದಿದ್ದರು ಎಂದು ಟಿಎಂಸಿ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>