<p><strong>ನವದೆಹಲಿ: </strong>1ರಿಂದ 8ನೇ ತರಗತಿಯ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಮುಂದಿನ ತರಗತಿಯ ಅಧ್ಯಯನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಗೆ (ಸಿಬಿಎಸ್ಇ) ನಿರ್ದೇಶನ ನೀಡಿದೆ.</p>.<p>ದೇಶದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿರುವುದರಿಂದ ಸಚಿವಾಲಯ ಈ ನಿರ್ದೇಶನ ನೀಡಿದೆ.</p>.<p>9 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಇದುವರೆಗೆ ನಡೆಸಿದ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಉತ್ತೀರ್ಣಗೊಳಿಸಲಾಗುವುದು. ಈ ಬಾರಿ ಉತ್ತೀರ್ಣರಾಗದವರು ಶಾಲೆಗಳಲ್ಲಿ ಆನ್ಲೈನ್ ಅಥವಾ ಆಫ್ಲೈನ್ ಆಧಾರಿತ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಬಹುದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಟ್ವೀಟ್ ಮಾಡಿದ್ದಾರೆ.</p>.<p>29 ವಿಷಯಗಳಿಗೆ ಮಾತ್ರ ಪರೀಕ್ಷೆ: 10 ಮತ್ತು 12ನೇ ತರಗತಿಯ ಮುಖ್ಯ ವಿಷಯಗಳಿಗೆ ಮಾತ್ರ ಸಿಬಿಎಸ್ಇ ಪರೀಕ್ಷೆ ನಡೆಸಲಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅಗತ್ಯವಿರುವ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಉಳಿದ ವಿಷಯಗಳಿಗೆ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.</p>.<p>ವಿದೇಶದಲ್ಲಿ 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ವಿಷಯಗಳಿಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ ತಿಳಿಸಿದ್ದಾರೆ.</p>.<p>25 ದೇಶಗಳಲ್ಲಿ ಸಿಬಿಎಸ್ಇ ಶಾಲೆಗಳಿವೆ. ಈ ಎಲ್ಲ ದೇಶಗಳು ಲಾಕ್ಡೌನ್ ಆಗಿರುವುದರಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.</p>.<p><strong>ಅನ್ವಯಿಕ ಗಣಿತ ಐಚ್ಛಿಕ ವಿಷಯ</strong><br />ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್ಇ) 11 ಮತ್ತು 12ನೇ ತರಗತಿಗಳಿಗೆ ‘ಅನ್ವಯಿಕ ಗಣಿತ’ವನ್ನು ಐಚ್ಛಿಕ ವಿಷಯವನ್ನಾಗಿ ಪರಿಚಯಿಸಿದೆ.</p>.<p>ಉನ್ನತ ಅಧ್ಯಯನಕ್ಕೆ ಗಣಿತವನ್ನು ಮುಖ್ಯ ವಿಷಯವನ್ನಾಗಿ ಆಯ್ಕೆ ಮಾಡಿಕೊಳ್ಳಲು ಬಯಸದವರು, ಈ ಅನ್ವಯಿಕ ಗಣಿತ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು.</p>.<p>11ನೇ ತರಗತಿಗೆ ಪ್ರಸಕ್ತ ವರ್ಷದಿಂದ, 12ನೇ ತರಗತಿಗೆ ಮುಂದಿನ ವರ್ಷದಿಂದ ಇದು ಅನ್ವಯವಾಗಲಿದೆ. 10ನೇ ತರಗತಿಯಲ್ಲಿ ‘ಬೇಸಿಕ್’ ಗಣಿತ ಅಧ್ಯಯನ ಮಾಡಿದವರಿಗೆ ಅನ್ವಯಿಕ ಗಣಿತದ ಅಧ್ಯಯನಕ್ಕೆ ಅವಕಾಶ ನೀಡಲಾಗುವುದು.</p>.<p><strong>ಜೆಇಇ–ಅಡ್ವಾನ್ಸ್ಡ್ ಮುಂದೂಡಿಕೆ<br />ನವದೆಹಲಿ (ಪಿಟಿಐ):</strong> ಐಐಟಿಗಳಲ್ಲಿ ಪ್ರವೇಶಕ್ಕಾಗಿ ಮೇ 17ರಂದು ನಡೆಯಬೇಕಿದ್ದಜೆಇಇ–ಅಡ್ವಾನ್ಸ್ಡ್ ಮುಂದೂಡಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p>.<p>ಕೋವಿಡ್–19 ಹಿನ್ನೆಲೆಯಲ್ಲಿ ಏಪ್ರಿಲ್ನಲ್ಲಿ ನಡೆಯಬೇಕಿದ್ದಜೆಇಇ(ಮೇನ್) ಅನ್ನೂ ಮುಂದೂಡಲಾಗಿದೆ. ಹೀಗಾಗಿ ಮೇನ್ ಪರೀಕ್ಷೆ ನಂತರಜೆಇಇ–ಅಡ್ವಾನ್ಸ್ಡ್ ನಡೆಯುವ ದಿನಾಂಕವನ್ನು ನಿರ್ಧರಿಸಲಾಗುವುದು’ ಎಂದು ಈ ಎರಡೂ ಪರೀಕ್ಷೆಗಳನ್ನು ಸಂಘಟಿಸುವ ಐಐಟಿ–ದೆಹಲಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>1ರಿಂದ 8ನೇ ತರಗತಿಯ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಮುಂದಿನ ತರಗತಿಯ ಅಧ್ಯಯನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಗೆ (ಸಿಬಿಎಸ್ಇ) ನಿರ್ದೇಶನ ನೀಡಿದೆ.</p>.<p>ದೇಶದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿರುವುದರಿಂದ ಸಚಿವಾಲಯ ಈ ನಿರ್ದೇಶನ ನೀಡಿದೆ.</p>.<p>9 ಮತ್ತು 11ನೇ ತರಗತಿ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಇದುವರೆಗೆ ನಡೆಸಿದ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಉತ್ತೀರ್ಣಗೊಳಿಸಲಾಗುವುದು. ಈ ಬಾರಿ ಉತ್ತೀರ್ಣರಾಗದವರು ಶಾಲೆಗಳಲ್ಲಿ ಆನ್ಲೈನ್ ಅಥವಾ ಆಫ್ಲೈನ್ ಆಧಾರಿತ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಬಹುದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಟ್ವೀಟ್ ಮಾಡಿದ್ದಾರೆ.</p>.<p>29 ವಿಷಯಗಳಿಗೆ ಮಾತ್ರ ಪರೀಕ್ಷೆ: 10 ಮತ್ತು 12ನೇ ತರಗತಿಯ ಮುಖ್ಯ ವಿಷಯಗಳಿಗೆ ಮಾತ್ರ ಸಿಬಿಎಸ್ಇ ಪರೀಕ್ಷೆ ನಡೆಸಲಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅಗತ್ಯವಿರುವ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಉಳಿದ ವಿಷಯಗಳಿಗೆ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.</p>.<p>ವಿದೇಶದಲ್ಲಿ 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ವಿಷಯಗಳಿಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ ತಿಳಿಸಿದ್ದಾರೆ.</p>.<p>25 ದೇಶಗಳಲ್ಲಿ ಸಿಬಿಎಸ್ಇ ಶಾಲೆಗಳಿವೆ. ಈ ಎಲ್ಲ ದೇಶಗಳು ಲಾಕ್ಡೌನ್ ಆಗಿರುವುದರಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.</p>.<p><strong>ಅನ್ವಯಿಕ ಗಣಿತ ಐಚ್ಛಿಕ ವಿಷಯ</strong><br />ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್ಇ) 11 ಮತ್ತು 12ನೇ ತರಗತಿಗಳಿಗೆ ‘ಅನ್ವಯಿಕ ಗಣಿತ’ವನ್ನು ಐಚ್ಛಿಕ ವಿಷಯವನ್ನಾಗಿ ಪರಿಚಯಿಸಿದೆ.</p>.<p>ಉನ್ನತ ಅಧ್ಯಯನಕ್ಕೆ ಗಣಿತವನ್ನು ಮುಖ್ಯ ವಿಷಯವನ್ನಾಗಿ ಆಯ್ಕೆ ಮಾಡಿಕೊಳ್ಳಲು ಬಯಸದವರು, ಈ ಅನ್ವಯಿಕ ಗಣಿತ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು.</p>.<p>11ನೇ ತರಗತಿಗೆ ಪ್ರಸಕ್ತ ವರ್ಷದಿಂದ, 12ನೇ ತರಗತಿಗೆ ಮುಂದಿನ ವರ್ಷದಿಂದ ಇದು ಅನ್ವಯವಾಗಲಿದೆ. 10ನೇ ತರಗತಿಯಲ್ಲಿ ‘ಬೇಸಿಕ್’ ಗಣಿತ ಅಧ್ಯಯನ ಮಾಡಿದವರಿಗೆ ಅನ್ವಯಿಕ ಗಣಿತದ ಅಧ್ಯಯನಕ್ಕೆ ಅವಕಾಶ ನೀಡಲಾಗುವುದು.</p>.<p><strong>ಜೆಇಇ–ಅಡ್ವಾನ್ಸ್ಡ್ ಮುಂದೂಡಿಕೆ<br />ನವದೆಹಲಿ (ಪಿಟಿಐ):</strong> ಐಐಟಿಗಳಲ್ಲಿ ಪ್ರವೇಶಕ್ಕಾಗಿ ಮೇ 17ರಂದು ನಡೆಯಬೇಕಿದ್ದಜೆಇಇ–ಅಡ್ವಾನ್ಸ್ಡ್ ಮುಂದೂಡಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p>.<p>ಕೋವಿಡ್–19 ಹಿನ್ನೆಲೆಯಲ್ಲಿ ಏಪ್ರಿಲ್ನಲ್ಲಿ ನಡೆಯಬೇಕಿದ್ದಜೆಇಇ(ಮೇನ್) ಅನ್ನೂ ಮುಂದೂಡಲಾಗಿದೆ. ಹೀಗಾಗಿ ಮೇನ್ ಪರೀಕ್ಷೆ ನಂತರಜೆಇಇ–ಅಡ್ವಾನ್ಸ್ಡ್ ನಡೆಯುವ ದಿನಾಂಕವನ್ನು ನಿರ್ಧರಿಸಲಾಗುವುದು’ ಎಂದು ಈ ಎರಡೂ ಪರೀಕ್ಷೆಗಳನ್ನು ಸಂಘಟಿಸುವ ಐಐಟಿ–ದೆಹಲಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>