ಜಮ್ಮು: ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ನಡೆಸಿರುವ ಗುಂಡಿನ ದಾಳಿಗೆಓರ್ವ ಯೋಧಹುತ್ಮಾತರಾಗಿದ್ದಾರೆ.
ರೈಫಲ್ಮೆನ್ ಕರಂಜೀತ್ ಸಿಂಗ್ ಮೃತ ಯೋಧ.ಸುದೀರ್ಘ ಕಾಲ ನಡೆದ ಈ ಚಕಮಕಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಕಳೆದ ಜನವರಿ ತಿಂಗಳಿನಿಂದ ಇಲ್ಲಿಯವರೆಗೆ 110 ಬಾರಿ ಕದನ ವಿರಾಮ ಉಲ್ಲಂಘಿಸಿದೆ.
ಅಖ್ನೂರ್ ಮತ್ತು ಸುಂದರ್ಬನಿವಲಯದಲ್ಲಿ ಪಾಕಿಸ್ತಾನ ಸೇನೆ ಸೋಮವಾರ ರಾತ್ರಿ ಶೆಲ್ ಮತ್ತು ಬಾಂಬ್ ದಾಳಿ ನಡೆಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತದ ಫೆ.26ರಂದು ಬಾಲಾಕೋಟ್ನ ಜೈಷ್–ಎ–ಮೊಹಮ್ಮದ್ ಉಗ್ರ ಶಿಬಿರದ ಮೇಲೆ ದಾಳಿ ನಡೆಸಿತ್ತು.