ನವದೆಹಲಿ:ಹಬ್ಬ ಮತ್ತು ವಿಶೇಷ ದಿನಗಳಲ್ಲಿ ಸ್ಥಳೀಯರು, ಸ್ವಯಂಸೇವಾ ಸಂಸ್ಥೆಗಳು ಶಾಲಾ ಮಕ್ಕಳಿಗೆ ನೀಡುವ ಆಹಾರ ಪದಾರ್ಥ ಮತ್ತು ತಿನಿಸುಗಳ ಬಗ್ಗೆ ಪ್ರತ್ಯೇಕ ದಾಖಲಾತಿಯನ್ನು ನಿರ್ವಹಿಸಿ ಎಂದು ಕರ್ನಾಟಕವೂ ಸೇರಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮವನ್ನು ನಡೆಸುತ್ತಿರುವ 11 ರಾಜ್ಯಗಳಿಗೆ ಕೇಂದ್ರ ಸರ್ಕಾರವು ನಿರ್ದೇಶನ ನೀಡಿದೆ.