ನವದೆಹಲಿ:ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಮಧ್ಯಂತರ ಬಜೆಟ್ನಲ್ಲಿ‘ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ಧನ್’ ಪಿಂಚಣಿ ಯೋಜನೆ ಘೋಷಿಸಲಾಗಿದೆ.
ತಿಂಗಳಿಗೆ ₹100 ಕಟ್ಟುವ ಮೂಲಕ ಈ ಪಿಂಚಣಿ ಯೋಜನೆಗೆ ಅಸಂಘಟಿತ ವಲಯದ ಕಾರ್ಮಿಕರು ಹೆಸರು ನೋಂದಾಯಿಸಿಕೊಳ್ಳಬಹುದು. ಹೀಗೆ ಯೋಜನೆಗೆ ಹೆಸರು ನೋಂದಾಯಿಸಿಕೊಂಡವರಿಗೆ 60 ವರ್ಷ ವಯಸ್ಸಾದ ನಂತರ ತಿಂಗಳಿಗೆ ₹3000 ಪಿಂಚಣಿ ದೊರೆಯಲಿದೆ ಎಂದು ಸಚಿವ ಪೀಯೂಷ್ ಗೋಯಲ್ ತಿಳಿಸಿದರು.
ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 8 ಕೋಟಿ ಗ್ರಾಮೀಣ ಕುಟುಂಬಗಳಿಗೆ ಉಚಿತ ಎಲ್ಪಿಜಿ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿತ್ತು. ಆ ಪೈಕಿ 6 ಕೋಟಿ ಕುಟುಂಬಗಳಿಗೆಈಗಾಲೇಉಚಿತ ಎಲ್ಪಿಜಿ ಸಂಪರ್ಕ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.