<p class="title"><strong>ನವದೆಹಲಿ: </strong>ಕೇಂದ್ರದ ಸೇವೆಗಳಿಗೆ ಉಪ ಕಾರ್ಯದರ್ಶಿ, ನಿರ್ದೇಶಕರು ಮತ್ತು ಜಂಟಿ ಕಾರ್ಯದರ್ಶಿ ಮಟ್ಟದ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳನ್ನು ನಿಯೋಜಿಸಿ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಅಧಿಕಾರಿಗಳ ವೃತ್ತಿಪರತೆ ಹಾಗೂ ಅನುಭವ ಹೆಚ್ಚಳಕ್ಕೆ ಇದು ಸಹಾಯವಾಗಲಿದೆ ಎಂದೂ ಹೇಳಿದೆ.</p>.<p class="title">ಕೇಂದ್ರ ಸಿಬ್ಬಂದಿ ಯೋಜನೆಯಡಿ, ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ಅಡಿಯಲ್ಲಿ ಕಾರ್ಯನಿರ್ವಹಿಸುವ ಮುಖ್ಯ ವಿಚಕ್ಷಣಾ ಅಧಿಕಾರಿಗಳ ಹುದ್ದೆಗಳಿಗೆ ಕಳೆದ ವರ್ಷದ ನವೆಂಬರ್ನಲ್ಲಿ ಮಾಡಿದ ಕೋರಿಕೆ ಮೇರೆಗೆ ರಾಜ್ಯಗಳಿಂದ ಕನಿಷ್ಠ ನಾಮನಿರ್ದೇಶನ ಬಂದಿದ್ದರಿಂದ ಕೇಂದ್ರ ಸರ್ಕಾರ ಮತ್ತೊಮ್ಮೆ ಈ ಕ್ರಮಕ್ಕೆ ಮುಂದಾಗಿದೆ.</p>.<p class="title">‘ಇಲ್ಲಿಯವರೆಗೆ ಸ್ವೀಕರಿಸಿರುವ ನಾಮನಿರ್ದೇಶನಗಳ ಸಂಖ್ಯೆ ಬಹಳ ಕಡಿಮೆ ಇದೆ. ಕೇಂದ್ರ ಸಿಬ್ಬಂದಿ ಯೋಜನೆಯಡಿ, ವಿಶೇಷವಾಗಿ ಉಪ ಕಾರ್ಯದರ್ಶಿ, ನಿರ್ದೇಶಕರ ಮಟ್ಟದ ಅಧಿಕಾರಿಗಳ ಪ್ರಾತಿನಿಧ್ಯ ಸಹ ಕಡಿಮೆ ಇದೆ’ ಎಂದು ಸಿಬ್ಬಂದಿ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.</p>.<p class="title">‘ಕಡಿಮೆ ಸಂಖ್ಯೆಯ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜನೆ ಮಾಡಿದ್ದರಿಂದ ಉಪ ಕಾರ್ಯದರ್ಶಿ/ನಿರ್ದೇಶಕ ಮಟ್ಟದ ಕೇಡರ್ ನಿರ್ವಹಣೆಯಲ್ಲಿ ಭಾರಿ ಅಂತರ ಉಂಟಾಗಿದೆ’ ಎಂದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ಕೇಂದ್ರದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳಿಗೆ ಕಳುಹಿಸಿರುವ ಆದೇಶದಲ್ಲಿ ಹೇಳಲಾಗಿದೆ.</p>.<p class="title">‘ಕೇಂದ್ರ ಸಿಬ್ಬಂದಿ ಯೋಜನೆಯಡಿ ನಿಯೋಜಿಸಲು ಹೆಚ್ಚಿನ ಸಂಖ್ಯೆಯ ಅಧಿಕಾರಿಗಳನ್ನು ಕಳುಹಿಸಬೇಕು. ಹಿರಿಯ ಶ್ರೇಣಿಗೆ ಬಡ್ತಿ ಪಡೆಯುವ ಅಂಚಿನಲ್ಲಿರುವ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡಬಾರದು. ಬಡ್ತಿ ಪಡೆಯಲು ಈ ಅಧಿಕಾರಿಗಳು ವಾಪಸು ಬರುವುದು ಅಗತ್ಯವಿರುತ್ತದೆ. ಆದ್ದರಿಂದ ಪೂರ್ಣ ಅವಧಿಗೆ ಲಭ್ಯವಾಗುವ ಅಧಿಕಾರಿಗಳ ಹೆಸರನ್ನು ಶಿಫಾರಸು ಮಾಡಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಕೇಂದ್ರದ ಸೇವೆಗಳಿಗೆ ಉಪ ಕಾರ್ಯದರ್ಶಿ, ನಿರ್ದೇಶಕರು ಮತ್ತು ಜಂಟಿ ಕಾರ್ಯದರ್ಶಿ ಮಟ್ಟದ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳನ್ನು ನಿಯೋಜಿಸಿ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಅಧಿಕಾರಿಗಳ ವೃತ್ತಿಪರತೆ ಹಾಗೂ ಅನುಭವ ಹೆಚ್ಚಳಕ್ಕೆ ಇದು ಸಹಾಯವಾಗಲಿದೆ ಎಂದೂ ಹೇಳಿದೆ.</p>.<p class="title">ಕೇಂದ್ರ ಸಿಬ್ಬಂದಿ ಯೋಜನೆಯಡಿ, ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ಅಡಿಯಲ್ಲಿ ಕಾರ್ಯನಿರ್ವಹಿಸುವ ಮುಖ್ಯ ವಿಚಕ್ಷಣಾ ಅಧಿಕಾರಿಗಳ ಹುದ್ದೆಗಳಿಗೆ ಕಳೆದ ವರ್ಷದ ನವೆಂಬರ್ನಲ್ಲಿ ಮಾಡಿದ ಕೋರಿಕೆ ಮೇರೆಗೆ ರಾಜ್ಯಗಳಿಂದ ಕನಿಷ್ಠ ನಾಮನಿರ್ದೇಶನ ಬಂದಿದ್ದರಿಂದ ಕೇಂದ್ರ ಸರ್ಕಾರ ಮತ್ತೊಮ್ಮೆ ಈ ಕ್ರಮಕ್ಕೆ ಮುಂದಾಗಿದೆ.</p>.<p class="title">‘ಇಲ್ಲಿಯವರೆಗೆ ಸ್ವೀಕರಿಸಿರುವ ನಾಮನಿರ್ದೇಶನಗಳ ಸಂಖ್ಯೆ ಬಹಳ ಕಡಿಮೆ ಇದೆ. ಕೇಂದ್ರ ಸಿಬ್ಬಂದಿ ಯೋಜನೆಯಡಿ, ವಿಶೇಷವಾಗಿ ಉಪ ಕಾರ್ಯದರ್ಶಿ, ನಿರ್ದೇಶಕರ ಮಟ್ಟದ ಅಧಿಕಾರಿಗಳ ಪ್ರಾತಿನಿಧ್ಯ ಸಹ ಕಡಿಮೆ ಇದೆ’ ಎಂದು ಸಿಬ್ಬಂದಿ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.</p>.<p class="title">‘ಕಡಿಮೆ ಸಂಖ್ಯೆಯ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜನೆ ಮಾಡಿದ್ದರಿಂದ ಉಪ ಕಾರ್ಯದರ್ಶಿ/ನಿರ್ದೇಶಕ ಮಟ್ಟದ ಕೇಡರ್ ನಿರ್ವಹಣೆಯಲ್ಲಿ ಭಾರಿ ಅಂತರ ಉಂಟಾಗಿದೆ’ ಎಂದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ಕೇಂದ್ರದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳಿಗೆ ಕಳುಹಿಸಿರುವ ಆದೇಶದಲ್ಲಿ ಹೇಳಲಾಗಿದೆ.</p>.<p class="title">‘ಕೇಂದ್ರ ಸಿಬ್ಬಂದಿ ಯೋಜನೆಯಡಿ ನಿಯೋಜಿಸಲು ಹೆಚ್ಚಿನ ಸಂಖ್ಯೆಯ ಅಧಿಕಾರಿಗಳನ್ನು ಕಳುಹಿಸಬೇಕು. ಹಿರಿಯ ಶ್ರೇಣಿಗೆ ಬಡ್ತಿ ಪಡೆಯುವ ಅಂಚಿನಲ್ಲಿರುವ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡಬಾರದು. ಬಡ್ತಿ ಪಡೆಯಲು ಈ ಅಧಿಕಾರಿಗಳು ವಾಪಸು ಬರುವುದು ಅಗತ್ಯವಿರುತ್ತದೆ. ಆದ್ದರಿಂದ ಪೂರ್ಣ ಅವಧಿಗೆ ಲಭ್ಯವಾಗುವ ಅಧಿಕಾರಿಗಳ ಹೆಸರನ್ನು ಶಿಫಾರಸು ಮಾಡಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>