ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ, ‘ಭಾರತ–ನೇಪಾಳ, ಭಾರತ– ಭೂತಾನ್ ಮತ್ತು ಭಾರತ– ಬಾಂಗ್ಲಾದೇಶ ಗಡಿಗಳಲ್ಲಿ ಅಗತ್ಯ ಸರಕುಗಳ ಸಾಗಣಿಕೆಗೆ ಅನುಮತಿ ನೀಡುವಂತೆ ಏಪ್ರಿಲ್ 24ರಂದು ನಿರ್ದೇಶನ ನೀಡಲಾಗಿತ್ತು. ಅಲ್ಲದೇ ಈ ಕುರಿತು ವರದಿ ಸಲ್ಲಿಸುವಂತೆ ತಿಳಿಸಲಾಗಿತ್ತು. ಆದರೆ ಇಲ್ಲಿಯವರೆಗೂ ವರದಿ ಬಂದಿಲ್ಲ’ ಎಂದು ಹೇಳಿದ್ದಾರೆ.