<p><strong>ನವದೆಹಲಿ:</strong> ಮಹದಾಯಿ ನದಿ ನೀರನ್ನು ಆಶ್ರಯಿಸಿರುವ ಕಳಸಾ–ಬಂಡೂರಿ ನಾಲೆಗಳ ತಿರುವು ಯೋಜನೆಗೆ ನೀಡಿದ್ದ ಅನುಮತಿಗೆ ಕೇಂದ್ರದ ಪರಿಸರ ಇಲಾಖೆ ತಡೆ ನೀಡಿದೆ.</p>.<p>ಮಹದಾಯಿ ಜಲ ವಿವಾದ ನ್ಯಾಯಮಂಡಳಿಯು ನೀರು ಹಂಚಿಕೆ ಮಾಡಿ 2018ರ ಆಗಸ್ಟ್ 14ರಂದು ನೀಡಿದ್ದ ಐತೀರ್ಪನ್ನು ಕಣಿವೆ ವ್ಯಾಪ್ತಿಯ ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದ ಸರ್ಕಾರಗಳು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿವೆ. ಹಾಗಾಗಿ ಪ್ರಕರಣ ಇತ್ಯರ್ಥ ಆಗುವವರೆಗೂ ಈ ಅನುಮತಿಯನ್ನು ತಡೆ ಹಿಡಿಯಲಾಗುವುದು ಎಂದು ಇಲಾಖೆ ತಿಳಿಸಿದೆ.</p>.<p>ಕಳಸಾ–ಬಂಡೂರಿ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ಗೆ ಬುಧವಾರ ಈ ಕುರಿತು ಪತ್ರ ಬರೆದಿರುವ ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಉಪ ನಿರ್ದೇಶಕ ಮೋಹಿತ್ ಸಕ್ಸೇನಾ, ಕಳಸಾ–ಬಂಡೂರಿ ಕುಡಿಯುವ ನೀರು ಪೂರೈಕೆ ಯೋಜನೆಗೆ ಅನುಮತಿ ನೀಡಿ 2019ರ ಅಕ್ಟೋಬರ್ 17ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣವು ಬಾಕಿ ಇರುವುದನ್ನು ಮನಗಂಡು ಮೊದಲು ನೀಡಿರುವ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಹೇಳಲಾಗಿದೆ.</p>.<p>ಜಲ ವಿದ್ಯುತ್ ಉತ್ಪಾದನೆ ಅಥವಾ ನೀರಾವರಿಗೆ ನೀರನ್ನು ಬಳಸಿಕೊಳ್ಳುವ ಉದ್ದೇಶ ಈ ಯೋಜನೆಯಲ್ಲಿ ಇಲ್ಲದ್ದರಿಂದ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಆರಂಭಕ್ಕೆ ಆಕ್ಷೇಪವಿಲ್ಲ. ಕರ್ನಾಟಕ ಸರ್ಕಾರದ ಈ ಯೋಜನೆಯ ಅನುಷ್ಠಾನಕ್ಕೆ ಅಭ್ಯಂತರ<br />ಇಲ್ಲ ಎಂದು ಕಳೆದ ಅಕ್ಟೋಬರ್ನಲ್ಲಿ ಅನುಮತಿ ನೀಡುವ ವೇಳೆ ಕೇಂದ್ರ ಸರ್ಕಾರ ಹೇಳಿತ್ತು.</p>.<p>ನೀರು ಹಂಚಿಕೆ ಮಾಡಿ ನ್ಯಾಯಮಂಡಳಿ ನೀಡಿರುವ ಐತೀರ್ಪನ್ನು ಆಧರಿಸಿ ಅಧಿಸೂಚನೆ ಹೊರಡಿಸಬೇಕು ಎಂಬ ಕರ್ನಾಟಕದ ಬೇಡಿಕೆಗೆ, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣದ ಕಾರಣವನ್ನೇ ಮುಂದಿರಿಸಿರುವ ಕೇಂದ್ರ, ಈ ಕುರಿತ ಅಧಿಸೂಚನೆ ಹೊರಡಿಸಿಲ್ಲ.</p>.<p>****</p>.<p>ಕಳಸಾ–ಬಂಡೂರಿ ಯೋಜನೆಯ ಅನಿವಾರ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು, ರಾಜ್ಯಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧ<br /><strong>-ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ</strong></p>.<p>ನಾನು ಮುಖ್ಯಮಂತ್ರಿ ಆಗಿದ್ದಾಗ ದೆಹಲಿಗೆ ನಿಯೋಗ ಕರೆದುಕೊಂಡು ಹೋಗಿದ್ದೆ. ಬಿಜೆಪಿಯವರು ಪ್ರಧಾನಿ ಎದುರು ತುಟಿಬಿಚ್ಚಲಿಲ್ಲ. ಈಗಲೂ ಬಿಡಲಾರರು<br /><strong>-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ</strong></p>.<p>ಗೋವಾ ಒತ್ತಡಕ್ಕೆ ಕೇಂದ್ರ ಮಣಿದಿದೆ. ಮೋದಿ ಅವರು ಇಡೀ ದೇಶಕ್ಕೆ ಪ್ರಧಾನಿಗಳೋ? ಅಥವಾ ಗೋವಾ ರಾಜ್ಯಕ್ಕೆ ಮಾತ್ರ ಪ್ರಧಾನಿಗಳೋ?<br /><strong>-ವೀರೇಶ ಸೊಬರದಮಠ ರೈತ ಸೇನಾ ರಾಜ್ಯ ಘಟಕದ ಆಧ್ಯಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹದಾಯಿ ನದಿ ನೀರನ್ನು ಆಶ್ರಯಿಸಿರುವ ಕಳಸಾ–ಬಂಡೂರಿ ನಾಲೆಗಳ ತಿರುವು ಯೋಜನೆಗೆ ನೀಡಿದ್ದ ಅನುಮತಿಗೆ ಕೇಂದ್ರದ ಪರಿಸರ ಇಲಾಖೆ ತಡೆ ನೀಡಿದೆ.</p>.<p>ಮಹದಾಯಿ ಜಲ ವಿವಾದ ನ್ಯಾಯಮಂಡಳಿಯು ನೀರು ಹಂಚಿಕೆ ಮಾಡಿ 2018ರ ಆಗಸ್ಟ್ 14ರಂದು ನೀಡಿದ್ದ ಐತೀರ್ಪನ್ನು ಕಣಿವೆ ವ್ಯಾಪ್ತಿಯ ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದ ಸರ್ಕಾರಗಳು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿವೆ. ಹಾಗಾಗಿ ಪ್ರಕರಣ ಇತ್ಯರ್ಥ ಆಗುವವರೆಗೂ ಈ ಅನುಮತಿಯನ್ನು ತಡೆ ಹಿಡಿಯಲಾಗುವುದು ಎಂದು ಇಲಾಖೆ ತಿಳಿಸಿದೆ.</p>.<p>ಕಳಸಾ–ಬಂಡೂರಿ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ಗೆ ಬುಧವಾರ ಈ ಕುರಿತು ಪತ್ರ ಬರೆದಿರುವ ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಉಪ ನಿರ್ದೇಶಕ ಮೋಹಿತ್ ಸಕ್ಸೇನಾ, ಕಳಸಾ–ಬಂಡೂರಿ ಕುಡಿಯುವ ನೀರು ಪೂರೈಕೆ ಯೋಜನೆಗೆ ಅನುಮತಿ ನೀಡಿ 2019ರ ಅಕ್ಟೋಬರ್ 17ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣವು ಬಾಕಿ ಇರುವುದನ್ನು ಮನಗಂಡು ಮೊದಲು ನೀಡಿರುವ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಹೇಳಲಾಗಿದೆ.</p>.<p>ಜಲ ವಿದ್ಯುತ್ ಉತ್ಪಾದನೆ ಅಥವಾ ನೀರಾವರಿಗೆ ನೀರನ್ನು ಬಳಸಿಕೊಳ್ಳುವ ಉದ್ದೇಶ ಈ ಯೋಜನೆಯಲ್ಲಿ ಇಲ್ಲದ್ದರಿಂದ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಆರಂಭಕ್ಕೆ ಆಕ್ಷೇಪವಿಲ್ಲ. ಕರ್ನಾಟಕ ಸರ್ಕಾರದ ಈ ಯೋಜನೆಯ ಅನುಷ್ಠಾನಕ್ಕೆ ಅಭ್ಯಂತರ<br />ಇಲ್ಲ ಎಂದು ಕಳೆದ ಅಕ್ಟೋಬರ್ನಲ್ಲಿ ಅನುಮತಿ ನೀಡುವ ವೇಳೆ ಕೇಂದ್ರ ಸರ್ಕಾರ ಹೇಳಿತ್ತು.</p>.<p>ನೀರು ಹಂಚಿಕೆ ಮಾಡಿ ನ್ಯಾಯಮಂಡಳಿ ನೀಡಿರುವ ಐತೀರ್ಪನ್ನು ಆಧರಿಸಿ ಅಧಿಸೂಚನೆ ಹೊರಡಿಸಬೇಕು ಎಂಬ ಕರ್ನಾಟಕದ ಬೇಡಿಕೆಗೆ, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣದ ಕಾರಣವನ್ನೇ ಮುಂದಿರಿಸಿರುವ ಕೇಂದ್ರ, ಈ ಕುರಿತ ಅಧಿಸೂಚನೆ ಹೊರಡಿಸಿಲ್ಲ.</p>.<p>****</p>.<p>ಕಳಸಾ–ಬಂಡೂರಿ ಯೋಜನೆಯ ಅನಿವಾರ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು, ರಾಜ್ಯಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧ<br /><strong>-ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ</strong></p>.<p>ನಾನು ಮುಖ್ಯಮಂತ್ರಿ ಆಗಿದ್ದಾಗ ದೆಹಲಿಗೆ ನಿಯೋಗ ಕರೆದುಕೊಂಡು ಹೋಗಿದ್ದೆ. ಬಿಜೆಪಿಯವರು ಪ್ರಧಾನಿ ಎದುರು ತುಟಿಬಿಚ್ಚಲಿಲ್ಲ. ಈಗಲೂ ಬಿಡಲಾರರು<br /><strong>-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ</strong></p>.<p>ಗೋವಾ ಒತ್ತಡಕ್ಕೆ ಕೇಂದ್ರ ಮಣಿದಿದೆ. ಮೋದಿ ಅವರು ಇಡೀ ದೇಶಕ್ಕೆ ಪ್ರಧಾನಿಗಳೋ? ಅಥವಾ ಗೋವಾ ರಾಜ್ಯಕ್ಕೆ ಮಾತ್ರ ಪ್ರಧಾನಿಗಳೋ?<br /><strong>-ವೀರೇಶ ಸೊಬರದಮಠ ರೈತ ಸೇನಾ ರಾಜ್ಯ ಘಟಕದ ಆಧ್ಯಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>