<p><strong>ಶ್ರೀನಗರ:</strong> ಹೊಸದಾಗಿ ಕೇಂದ್ರಾಡಳಿತ ಪ್ರದೇಶಗಳಾಗಿ ರಚನೆಯಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 371ನೇ ವಿಧಿ ಅಡಿ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.</p>.<p>‘ಈ ಹಿಂದೆ ರಾಜ್ಯವಾಗಿದ್ದ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದುಪಡಿಸಿದ್ದಕ್ಕೆ ಪರಿಹಾರವಾಗಿ, ಜಮ್ಮು ಮತ್ತು ಕಾಶ್ಮೀರದ ಕಾನೂನು ಇಲಾಖೆಗೆ ಕೇಂದ್ರ ಗೃಹಸಚಿವಾಲಯ ಈ ಪ್ರಸ್ತಾವನೆ ಕಳುಹಿಸಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಹೊಸ ವ್ಯವಸ್ಥೆಯ ರೂಪರೇಷೆಗಳನ್ನು ಸಿದ್ಧಪಡಿಸಲು ಚರ್ಚೆ ನಡೆಸಲಾಗುತ್ತಿದೆ. ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ, ನೆರೆಯ ಹಿಮಾಚಲ ಪ್ರದೇಶದಲ್ಲಿ ಇರುವ ವ್ಯವಸ್ಥೆಯ ಆಧಾರದ ಮೇಲೆ ಈ ಸೌಲಭ್ಯಗಳನ್ನು ರೂಪುಗೊಳಿಸಬಹುದು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಜಮ್ಮುವಿನಲ್ಲೂ ಕಳೆದ ಕೆಲವು ಸಮಯದಿಂದ 371ನೇ ವಿಧಿ ಕುರಿತು ಆಗ್ರಹ ಕೇಳಿಬರುತ್ತಿದೆ.</p>.<p>‘ಸಂವಿಧಾನದ 371ನೇ ವಿಧಿ ಅಡಿಯಲ್ಲಿ ಎಲ್ಲಾ ಗುಡ್ಡಗಾಡು ರಾಜ್ಯಗಳಿಗೂ ವಿಶೇಷ ಸೌಲಭ್ಯಗಳು ಇವೆ’ ಎಂದು ಪಿಡಿಪಿ ನಾಯಕ ಮುಜಫ್ಫರ್ ಹುಸೇನ್ ಬೇಗ್ ಕಳೆದ ತಿಂಗಳು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಹೊಸದಾಗಿ ಕೇಂದ್ರಾಡಳಿತ ಪ್ರದೇಶಗಳಾಗಿ ರಚನೆಯಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 371ನೇ ವಿಧಿ ಅಡಿ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.</p>.<p>‘ಈ ಹಿಂದೆ ರಾಜ್ಯವಾಗಿದ್ದ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದುಪಡಿಸಿದ್ದಕ್ಕೆ ಪರಿಹಾರವಾಗಿ, ಜಮ್ಮು ಮತ್ತು ಕಾಶ್ಮೀರದ ಕಾನೂನು ಇಲಾಖೆಗೆ ಕೇಂದ್ರ ಗೃಹಸಚಿವಾಲಯ ಈ ಪ್ರಸ್ತಾವನೆ ಕಳುಹಿಸಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಹೊಸ ವ್ಯವಸ್ಥೆಯ ರೂಪರೇಷೆಗಳನ್ನು ಸಿದ್ಧಪಡಿಸಲು ಚರ್ಚೆ ನಡೆಸಲಾಗುತ್ತಿದೆ. ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ, ನೆರೆಯ ಹಿಮಾಚಲ ಪ್ರದೇಶದಲ್ಲಿ ಇರುವ ವ್ಯವಸ್ಥೆಯ ಆಧಾರದ ಮೇಲೆ ಈ ಸೌಲಭ್ಯಗಳನ್ನು ರೂಪುಗೊಳಿಸಬಹುದು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಜಮ್ಮುವಿನಲ್ಲೂ ಕಳೆದ ಕೆಲವು ಸಮಯದಿಂದ 371ನೇ ವಿಧಿ ಕುರಿತು ಆಗ್ರಹ ಕೇಳಿಬರುತ್ತಿದೆ.</p>.<p>‘ಸಂವಿಧಾನದ 371ನೇ ವಿಧಿ ಅಡಿಯಲ್ಲಿ ಎಲ್ಲಾ ಗುಡ್ಡಗಾಡು ರಾಜ್ಯಗಳಿಗೂ ವಿಶೇಷ ಸೌಲಭ್ಯಗಳು ಇವೆ’ ಎಂದು ಪಿಡಿಪಿ ನಾಯಕ ಮುಜಫ್ಫರ್ ಹುಸೇನ್ ಬೇಗ್ ಕಳೆದ ತಿಂಗಳು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>