‘ಪ್ರತಿ ತಿಂಗಳು ಹಲವು ಸರ್ಕಾರಿ ನೌಕರರು ಬಡ್ತಿ ಸಿಗದೇ ನಿವೃತ್ತಿ ಹೊಂದುತ್ತಿದ್ದಾರೆ. ಇದರಿಂದಾಗಿ ನೌಕರರಲ್ಲಿ ಗೊಂದಲ, ಅಸಮಾಧಾನ, ಸ್ಥೈರ್ಯ ಕುಗ್ಗಿದೆ. ಕೋವಿಡ್–19 ಪಿಡುಗಿನ ಈ ಸಂದರ್ಭದಲ್ಲಿ ಜನರ ಸೇವೆಯಲ್ಲಿ ಸರ್ಕಾರಿ ನೌಕರರು ಮುಂಚೂಣಿಯಲ್ಲಿದ್ದು, ಅವರ ಸ್ಥೈರ್ಯ ಹೆಚ್ಚಿಸುವುದು ಮುಖ್ಯ’ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.