‘ಗಲ್ಲುಶಿಕ್ಷೆಗೆ ಗುರಿಯಾದವರು ಕ್ಷಮಾದಾನ ಅರ್ಜಿ ಸಲ್ಲಿಸಲು ಬಯಸುವುದಾದರೆ, ಶಿಕ್ಷೆ ಜಾರಿಯಾದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು. ಒಂದು ವೇಳೆ ಕ್ಷಮಾದಾನ ಅರ್ಜಿ ವಜಾಗೊಂಡರೆ, ಆ ದಿನದಿಂದ ಏಳು ದಿನಗಳ ಒಳಗೆ ಸಂಬಂಧಪಟ್ಟ ನ್ಯಾಯಾಲಯ, ರಾಜ್ಯ ಸರ್ಕಾರ, ಜೈಲು ಅಧಿಕಾರಿಗಳು ಕಡ್ಡಾಯವಾಗಿ ಮರಣದಂಡನೆ ವಾರಂಟ್ ಜಾರಿಗೊಳಿಸಬೇಕು. ವಾರಂಟ್ ಜಾರಿಯಾದ ದಿನದಿಂದ ಏಳು ದಿನಗಳ ಒಳಗಾಗಿ ಗಲ್ಲುಶಿಕ್ಷೆ ಜಾರಿಗೊಳಿಸಬೇಕು. ಅರ್ಜಿ ಸಲ್ಲಿಸಿದವರ ಜತೆಗಿನ ಅಪರಾಧಿಗಳ ಕ್ಷಮಾದಾನ ಅರ್ಜಿ ಯಾವುದೇ ಹಂತದಲ್ಲಿದ್ದರೂ, ಅದನ್ನು ಪರಿಗಣಿಸುವಂತಿಲ್ಲ’ ಎಂದು ಎಂಎಚ್ಎ ಮನವಿ ಮಾಡಿದೆ.