<p><strong>ನವದೆಹಲಿ</strong>: ಕೋವಿಡ್ ಪಿಡುಗು ಏರುತ್ತಲೇ ಇರುವುದರಿಂದಾಗಿ 2020–21ನೇ ವರ್ಷದ ಪಠ್ಯಕ್ರಮ (ಸಿಲೆಬಸ್) ಮತ್ತು ತರಗತಿ ಅವಧಿಯನ್ನು ಕಡಿಮೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತಿಸುತ್ತಿದೆ.</p>.<p>ಪಿಡುಗಿನ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಲಿಯಲು ಸಾಧ್ಯವಾಗುವ ರೀತಿಯಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡಬೇಕು ಎಂದು ಹೆತ್ತವರು ಮತ್ತು ಶಿಕ್ಷಕರು ತಮ್ಮನ್ನು ಕೋರಿದ್ದಾರೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ (ಎಚ್ಆರ್ಡಿ) ರಮೇಶ್ ನಿಶಾಂಕ್ ಪೋಖ್ರಿಯಾಲ್ ಹೇಳಿದ್ದಾರೆ.</p>.<p>‘ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು ಈ ವಿಚಾರದಲ್ಲಿ ತಮ್ಮ ನಿಲುವುಗಳನ್ನು ತಿಳಿಸಬೇಕು. ಸಚಿವಾಲಯ ಅಥವಾ ನನ್ನ ಟ್ವಿಟರ್ ಅಥವಾ ಫೇಸ್ಬುಕ್ ಖಾತೆಗೆ ಈ ಹ್ಯಾಷ್ಟ್ಯಾಗ್ (#SyllabusForStudents2020) ಬಳಸಿ ಅಭಿಪ್ರಾಯ ತಿಳಿಸಿ. ಎಲ್ಲರ ಅಭಿಮತವನ್ನು ಗಣನೆಗೆ ತೆಗೆದುಕೊಂಡು ನಿರ್ಧಾರಕ್ಕೆ ಬರಬಹುದು’ ಎಂದು ಪೋಖ್ರಿಯಾಲ್ ಹೇಳಿದ್ದಾರೆ.</p>.<p>ಕೋವಿಡ್ ಪಿಡುಗಿನಿಂದಾಗಿ ಮಾರ್ಚ್ನಲ್ಲಿಯೇ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಇವುಗಳನ್ನು ತೆರೆಯುವ ಬಗ್ಗೆ ರಾಜ್ಯಗಳು ಮತ್ತು ಸಂಬಂಧಪಟ್ಟ ಇತರರ ಜತೆಗೆ ಸಚಿವಾಲಯವು ಸೋಮವಾರದಿಂದಲೇ ಸಮಾಲೋಚನೆ ಆರಂಭಿಸಿದೆ.</p>.<p>ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅನಿತಾ ಕರ್ವಾಲ್ ಅವರು ರಾಜ್ಯಗಳ ಶಿಕ್ಷಣ ಕಾರ್ಯದರ್ಶಿಗಳ ಜತೆಗೆ ಸಭೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷೆ, ಶಾಲೆಯಲ್ಲಿ ನೈರ್ಮಲ್ಯ, ಆನ್ಲೈನ್ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳು ಈ ಸಭೆಯಲ್ಲಿ ಚರ್ಚೆಗೆ ಬಂದಿವೆ.</p>.<p>ರಾಜ್ಯಗಳ ಅಭಿಪ್ರಾಯಗಳನ್ನು ಪರಿಶೀಲಿಸಿ, ಬಳಿಕ ಅವುಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುವುದು. ಈ ಸಚಿವಾಲಯಗಳ ಸಲಹೆಯನ್ನು ಆಧರಿಸಿ, ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಸಂಬಂಧಿಸಿ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಪೋಖ್ರಿಯಾಲ್ ಹೇಳಿದ್ದಾರೆ. ಶಾಲಾ ಶಿಕ್ಷಣದ ಬಗ್ಗೆ ರಾಜ್ಯ ಸರ್ಕಾರಗಳ ಅಭಿಮತ ಸಂಗ್ರಹಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರ ಸುರಕ್ಷೆಯೇ ನಮ್ಮ ಆದ್ಯತೆ ಎಂದು ಅವರು ತಿಳಿಸಿದ್ದಾರೆ.</p>.<p>ಹಂತ ಹಂತವಾಗಿ ತರಗತಿಗಳನ್ನು ಆರಂಭಿಸಬೇಕು, ಹಾಜರಾತಿಯನ್ನು ಕಡ್ಡಾಯ ಮಾಡಬಾರದು ಮತ್ತು ದಿನ ಬಿಟ್ಟು ದಿನ ವಿದ್ಯಾರ್ಥಿಗಳು ಶಾಲೆಗೆ ಬರುವ ವ್ಯವಸ್ಥೆ ಮಾಡಬೇಕು ಎಂಬುದು ರಾಜ್ಯಗಳಿಂದ ಬಂದ ಮುಖ್ಯ ಸಲಹೆಗಳಾಗಿವೆ.</p>.<p>ಸರ್ಕಾರಿ ಶಾಲೆಗಳಲ್ಲಿ ಹಲವನ್ನು ಕೋವಿಡ್ ಕೇಂದ್ರಗಳು ಮತ್ತು ವಲಸೆ ಕಾರ್ಮಿಕರ ಆಶ್ರಯ ಶಿಬಿರಗಳಾಗಿ ಪರಿವರ್ತಿಸಲಾಗಿದೆ. ಹಾಗಾಗಿ ಇವು ಸದ್ಯಕ್ಕೆ ತರಗತಿ ಆರಂಭಿಸಲು ಲಭ್ಯವಾಗುವುದಿಲ್ಲ ಎಂಬ ವಿಚಾರವೂ ಇದೆ.</p>.<p>**<br />ಶಾಲಾ ಶಿಕ್ಷಣದ ಬಗ್ಗೆ ರಾಜ್ಯ ಸರ್ಕಾರಗಳ ಅಭಿಮತ ಸಂಗ್ರಹಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರ ಸುರಕ್ಷೆಯೇ ನಮ್ಮ ಆದ್ಯತೆ.<br /><em><strong>-ರಮೇಶ್ ನಿಶಾಂಕ್ ಪೋಖ್ರಿಯಾಲ್, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ ಪಿಡುಗು ಏರುತ್ತಲೇ ಇರುವುದರಿಂದಾಗಿ 2020–21ನೇ ವರ್ಷದ ಪಠ್ಯಕ್ರಮ (ಸಿಲೆಬಸ್) ಮತ್ತು ತರಗತಿ ಅವಧಿಯನ್ನು ಕಡಿಮೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತಿಸುತ್ತಿದೆ.</p>.<p>ಪಿಡುಗಿನ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಲಿಯಲು ಸಾಧ್ಯವಾಗುವ ರೀತಿಯಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡಬೇಕು ಎಂದು ಹೆತ್ತವರು ಮತ್ತು ಶಿಕ್ಷಕರು ತಮ್ಮನ್ನು ಕೋರಿದ್ದಾರೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ (ಎಚ್ಆರ್ಡಿ) ರಮೇಶ್ ನಿಶಾಂಕ್ ಪೋಖ್ರಿಯಾಲ್ ಹೇಳಿದ್ದಾರೆ.</p>.<p>‘ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು ಈ ವಿಚಾರದಲ್ಲಿ ತಮ್ಮ ನಿಲುವುಗಳನ್ನು ತಿಳಿಸಬೇಕು. ಸಚಿವಾಲಯ ಅಥವಾ ನನ್ನ ಟ್ವಿಟರ್ ಅಥವಾ ಫೇಸ್ಬುಕ್ ಖಾತೆಗೆ ಈ ಹ್ಯಾಷ್ಟ್ಯಾಗ್ (#SyllabusForStudents2020) ಬಳಸಿ ಅಭಿಪ್ರಾಯ ತಿಳಿಸಿ. ಎಲ್ಲರ ಅಭಿಮತವನ್ನು ಗಣನೆಗೆ ತೆಗೆದುಕೊಂಡು ನಿರ್ಧಾರಕ್ಕೆ ಬರಬಹುದು’ ಎಂದು ಪೋಖ್ರಿಯಾಲ್ ಹೇಳಿದ್ದಾರೆ.</p>.<p>ಕೋವಿಡ್ ಪಿಡುಗಿನಿಂದಾಗಿ ಮಾರ್ಚ್ನಲ್ಲಿಯೇ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಇವುಗಳನ್ನು ತೆರೆಯುವ ಬಗ್ಗೆ ರಾಜ್ಯಗಳು ಮತ್ತು ಸಂಬಂಧಪಟ್ಟ ಇತರರ ಜತೆಗೆ ಸಚಿವಾಲಯವು ಸೋಮವಾರದಿಂದಲೇ ಸಮಾಲೋಚನೆ ಆರಂಭಿಸಿದೆ.</p>.<p>ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅನಿತಾ ಕರ್ವಾಲ್ ಅವರು ರಾಜ್ಯಗಳ ಶಿಕ್ಷಣ ಕಾರ್ಯದರ್ಶಿಗಳ ಜತೆಗೆ ಸಭೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷೆ, ಶಾಲೆಯಲ್ಲಿ ನೈರ್ಮಲ್ಯ, ಆನ್ಲೈನ್ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳು ಈ ಸಭೆಯಲ್ಲಿ ಚರ್ಚೆಗೆ ಬಂದಿವೆ.</p>.<p>ರಾಜ್ಯಗಳ ಅಭಿಪ್ರಾಯಗಳನ್ನು ಪರಿಶೀಲಿಸಿ, ಬಳಿಕ ಅವುಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುವುದು. ಈ ಸಚಿವಾಲಯಗಳ ಸಲಹೆಯನ್ನು ಆಧರಿಸಿ, ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಸಂಬಂಧಿಸಿ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಪೋಖ್ರಿಯಾಲ್ ಹೇಳಿದ್ದಾರೆ. ಶಾಲಾ ಶಿಕ್ಷಣದ ಬಗ್ಗೆ ರಾಜ್ಯ ಸರ್ಕಾರಗಳ ಅಭಿಮತ ಸಂಗ್ರಹಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರ ಸುರಕ್ಷೆಯೇ ನಮ್ಮ ಆದ್ಯತೆ ಎಂದು ಅವರು ತಿಳಿಸಿದ್ದಾರೆ.</p>.<p>ಹಂತ ಹಂತವಾಗಿ ತರಗತಿಗಳನ್ನು ಆರಂಭಿಸಬೇಕು, ಹಾಜರಾತಿಯನ್ನು ಕಡ್ಡಾಯ ಮಾಡಬಾರದು ಮತ್ತು ದಿನ ಬಿಟ್ಟು ದಿನ ವಿದ್ಯಾರ್ಥಿಗಳು ಶಾಲೆಗೆ ಬರುವ ವ್ಯವಸ್ಥೆ ಮಾಡಬೇಕು ಎಂಬುದು ರಾಜ್ಯಗಳಿಂದ ಬಂದ ಮುಖ್ಯ ಸಲಹೆಗಳಾಗಿವೆ.</p>.<p>ಸರ್ಕಾರಿ ಶಾಲೆಗಳಲ್ಲಿ ಹಲವನ್ನು ಕೋವಿಡ್ ಕೇಂದ್ರಗಳು ಮತ್ತು ವಲಸೆ ಕಾರ್ಮಿಕರ ಆಶ್ರಯ ಶಿಬಿರಗಳಾಗಿ ಪರಿವರ್ತಿಸಲಾಗಿದೆ. ಹಾಗಾಗಿ ಇವು ಸದ್ಯಕ್ಕೆ ತರಗತಿ ಆರಂಭಿಸಲು ಲಭ್ಯವಾಗುವುದಿಲ್ಲ ಎಂಬ ವಿಚಾರವೂ ಇದೆ.</p>.<p>**<br />ಶಾಲಾ ಶಿಕ್ಷಣದ ಬಗ್ಗೆ ರಾಜ್ಯ ಸರ್ಕಾರಗಳ ಅಭಿಮತ ಸಂಗ್ರಹಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರ ಸುರಕ್ಷೆಯೇ ನಮ್ಮ ಆದ್ಯತೆ.<br /><em><strong>-ರಮೇಶ್ ನಿಶಾಂಕ್ ಪೋಖ್ರಿಯಾಲ್, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>