ನವದೆಹಲಿ: ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಈ ಬಾರಿ ಕಡು ಬೇಸಿಗೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡು, ರಾಯಲಸೀಮಾ, ತಮಿಳುನಾಡು ಮತ್ತು ಪುದುಚೇರಿ ಹಾಗೂ ನಾಲ್ಕು ಈಶಾನ್ಯ ರಾಜ್ಯಗಳು ಈ ಬಾರಿಯ ಬೇಸಿಗೆ ಅವಧಿಯಲ್ಲಿನ ಅತ್ಯಂತ ತಂಪಾದ ಪ್ರದೇಶಗಳಾಗಿವೆ. ಈ ಪ್ರದೇಶಗಳಲ್ಲಿನ ಸರಾಸರಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡು ಬರುವುದಿಲ್ಲ ಎಂದು ತಿಳಿಸಿದೆ.
ಆದರೆ, ದೇಶದ ಉಳಿದ ಭಾಗಗಳಲ್ಲಿ ಕಡು ಬೇಸಿಗೆ ಇರಲಿದೆ. ಅದರಲ್ಲೂ ಮಧ್ಯ ಭಾಗ ಮತ್ತು ಉತ್ತರ ರಾಜ್ಯಗಳಲ್ಲಿ ಅತಿ ಹೆಚ್ಚು ತಾಪಮಾನ ಇರಲಿದೆ. ಸರಾಸರಿ ತಾಪಮಾನಕ್ಕಿಂತ ಹೆಚ್ಚಿನ ಉಷ್ಣಾಂಶ ಈ ಪ್ರದೇಶಗಳಲ್ಲಿ ಕಂಡು ಬರಲಿದೆ ಎಂದು ಇಲಾಖೆ ವಿವರಿಸಿದೆ.