ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಈ ಬಾರಿ ಕಡು ಬೇಸಿಗೆ ಇಲ್ಲ’

Last Updated 1 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಈ ಬಾರಿ ಕಡು ಬೇಸಿಗೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡು, ರಾಯಲಸೀಮಾ, ತಮಿಳುನಾಡು ಮತ್ತು ಪುದುಚೇರಿ ಹಾಗೂ ನಾಲ್ಕು ಈಶಾನ್ಯ ರಾಜ್ಯಗಳು ಈ ಬಾರಿಯ ಬೇಸಿಗೆ ಅವಧಿಯಲ್ಲಿನ ಅತ್ಯಂತ ತಂಪಾದ ಪ್ರದೇಶಗಳಾಗಿವೆ. ಈ ಪ್ರದೇಶಗಳಲ್ಲಿನ ಸರಾಸರಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡು ಬರುವುದಿಲ್ಲ ಎಂದು ತಿಳಿಸಿದೆ.

ಆದರೆ, ದೇಶದ ಉಳಿದ ಭಾಗಗಳಲ್ಲಿ ಕಡು ಬೇಸಿಗೆ ಇರಲಿದೆ. ಅದರಲ್ಲೂ ಮಧ್ಯ ಭಾಗ ಮತ್ತು ಉತ್ತರ ರಾಜ್ಯಗಳಲ್ಲಿ ಅತಿ ಹೆಚ್ಚು ತಾಪಮಾನ ಇರಲಿದೆ.  ಸರಾಸರಿ ತಾಪಮಾನಕ್ಕಿಂತ ಹೆಚ್ಚಿನ ಉಷ್ಣಾಂಶ ಈ ಪ್ರದೇಶಗಳಲ್ಲಿ ಕಂಡು ಬರಲಿದೆ ಎಂದು ಇಲಾಖೆ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT