<p><strong>ನವದೆಹಲಿ</strong>: ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಆರಂಭಿಸಲಾದ ‘ಜಲ ಜೀವನ’ ಯೋಜನೆಯ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಕೇಂದ್ರವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೋಮವಾರ ಈ ಕುರಿತು ಪತ್ರ ಬರೆದಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್, ಪ್ರತಿ ಮನೆಗೆ ನಲ್ಲಿಯ ಸಂಪರ್ಕ ಕಲ್ಪಿಸಿ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಈ ಯೋಜನೆಯನ್ನು 2023ರೊಳಗೆ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ.</p>.<p>ಪ್ರತಿ ಕುಟುಂಬಕ್ಕೆ ನಿತ್ಯ 55 ಲೀಟರ್ ಶುದ್ಧ ನೀರು ಒದಗಿಸುವ ಈ ಯೋಜನೆಯ ಪ್ರಯೋಜನವನ್ನು ರಾಜ್ಯದ 89.61 ಲಕ್ಷ ಕುಟುಂಬಗಳು ಪಡೆಯಲಿವೆ. ಪೈಕಿ ಈ ಯೋಜನೆ ಅಡಿ 24.41 ಲಕ್ಷ ಕುಟುಂಬಗಳಿಗೆ ಈಗಾಗಲೇ ನೀರು ಪೂರೈಕೆ ಸಂಪರ್ಕ ಕಲ್ಪಿಸಲಾಗಿದೆ.</p>.<p>ಕಳೆದ ವರ್ಷ ಯೋಜನೆ ಅಡಿ ಕೇವಲ 22,133 ಕುಟುಂಬಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. 2020–21ನೇ ಸಾಲಿನಲ್ಲಿ 23.57 ಲಕ್ಷ ಕುಟುಂಬಗಳನ್ನು ಯೋಜನೆಯಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ ₹ 1,810.40 ಕೋಟಿ ಅನುದಾನವನ್ನು ರಾಜ್ಯಕ್ಕೆ ಒದಗಿಸಲಾಗಿದ್ದು, ರಾಜ್ಯದ ಪಾಲುದಾರಿಕೆಯ ಮೊತ್ತವೂ ಒಳಗೊಂಡಂತೆ ಒಟ್ಟು ₹ 2,734 ಕೋಟಿ ಲಭ್ಯವಿದೆ. ಅಗತ್ಯವಿದ್ದರೆ ಇನ್ನಷ್ಟು ಅನುದಾನವನ್ನು ಒದಗಿಸಲಾಗುವುದು. ಅಭಿಯಾನದ ಮಾದರಿಯಲ್ಲಿ ಯೋಜನೆಯನ್ನು ಸಾಕಾರಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ತಿಳಿಸಿದೆ.</p>.<p>ಫ್ಲೋರೈಡ್ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶಗಳನ್ನೂ ಯೋಜನೆ ಅಡಿ ಆಯ್ಕೆ ಮಾಡಿ ಶುದ್ಧ ಕುಡಿಯುವ ನೀರು ಪೂರೈಸುವಂತೆ ಸಚಿವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಆರಂಭಿಸಲಾದ ‘ಜಲ ಜೀವನ’ ಯೋಜನೆಯ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಕೇಂದ್ರವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸೋಮವಾರ ಈ ಕುರಿತು ಪತ್ರ ಬರೆದಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್, ಪ್ರತಿ ಮನೆಗೆ ನಲ್ಲಿಯ ಸಂಪರ್ಕ ಕಲ್ಪಿಸಿ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಈ ಯೋಜನೆಯನ್ನು 2023ರೊಳಗೆ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ.</p>.<p>ಪ್ರತಿ ಕುಟುಂಬಕ್ಕೆ ನಿತ್ಯ 55 ಲೀಟರ್ ಶುದ್ಧ ನೀರು ಒದಗಿಸುವ ಈ ಯೋಜನೆಯ ಪ್ರಯೋಜನವನ್ನು ರಾಜ್ಯದ 89.61 ಲಕ್ಷ ಕುಟುಂಬಗಳು ಪಡೆಯಲಿವೆ. ಪೈಕಿ ಈ ಯೋಜನೆ ಅಡಿ 24.41 ಲಕ್ಷ ಕುಟುಂಬಗಳಿಗೆ ಈಗಾಗಲೇ ನೀರು ಪೂರೈಕೆ ಸಂಪರ್ಕ ಕಲ್ಪಿಸಲಾಗಿದೆ.</p>.<p>ಕಳೆದ ವರ್ಷ ಯೋಜನೆ ಅಡಿ ಕೇವಲ 22,133 ಕುಟುಂಬಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. 2020–21ನೇ ಸಾಲಿನಲ್ಲಿ 23.57 ಲಕ್ಷ ಕುಟುಂಬಗಳನ್ನು ಯೋಜನೆಯಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ ₹ 1,810.40 ಕೋಟಿ ಅನುದಾನವನ್ನು ರಾಜ್ಯಕ್ಕೆ ಒದಗಿಸಲಾಗಿದ್ದು, ರಾಜ್ಯದ ಪಾಲುದಾರಿಕೆಯ ಮೊತ್ತವೂ ಒಳಗೊಂಡಂತೆ ಒಟ್ಟು ₹ 2,734 ಕೋಟಿ ಲಭ್ಯವಿದೆ. ಅಗತ್ಯವಿದ್ದರೆ ಇನ್ನಷ್ಟು ಅನುದಾನವನ್ನು ಒದಗಿಸಲಾಗುವುದು. ಅಭಿಯಾನದ ಮಾದರಿಯಲ್ಲಿ ಯೋಜನೆಯನ್ನು ಸಾಕಾರಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ತಿಳಿಸಿದೆ.</p>.<p>ಫ್ಲೋರೈಡ್ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶಗಳನ್ನೂ ಯೋಜನೆ ಅಡಿ ಆಯ್ಕೆ ಮಾಡಿ ಶುದ್ಧ ಕುಡಿಯುವ ನೀರು ಪೂರೈಸುವಂತೆ ಸಚಿವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>