ಮುಂಬೈ:ಬ್ಯಾಂಕ್ ಸಾಲ ನೀಡಿಕೆ ಹಗರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಶನಿವಾರ ಹಾಜರಾದರು.
ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ಇವರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂದಾ ಕೊಚ್ಚರ್ ಮತ್ತು ವಿಡಿಯೊಕಾನ್ ಸಮೂಹದ ಪ್ರವರ್ತಕ ವೇಣುಗೋಪಾಲ ಧೂತ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸಿದ್ದರು.