<p>ಹೈದರಾಬಾದ್:ನಿರುದ್ಯೋಗಿ ಯುವಕರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶದಲ್ಲಿ ಪ್ರತಿ ತಿಂಗಳು ₹1,000 ನಿರುದ್ಯೋಗ ಭತ್ಯೆ ನೀಡುವ ‘ಮುಖ್ಯಮಂತ್ರಿ ಯುವ ನೇಸ್ತಂ’ ಯೋಜನೆಗೆ ಮುಖ್ಯಮಂತ್ರಿ ಎನ್.ಚಂದ್ರ ಬಾಬು ನಾಯ್ಡು ಚಾಲನೆ ನೀಡಿದರು.</p>.<p>ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಂದ ಬಂದಿರುವ ಪದವೀಧರ ನಿರುದ್ಯೋಗಿ ಯುವಕರಿ ಗೆಸೂಕ್ತ ಉದ್ಯೋಗ ದೊರಕುವವರೆಗೆ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) 2014ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ಯೋಜನೆ ಕುರಿತು ಘೋಷಣೆ ಮಾಡಿತ್ತು.</p>.<p>ಸದ್ಯ 2.07 ಲಕ್ಷ ನಿರುದ್ಯೋಗಿ ಯುವಕರು ಹೆಸರನ್ನು ನೋಂದಾಯಿ ಸಿದ್ದಾರೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಭತ್ಯೆ ಸಂದಾಯ ವಾಗಲಿದೆ. ಮೊದಲನೇ ತಿಂಗಳಿನ ಭತ್ಯೆ ಬುಧವಾರ (ಅಕ್ಟೋಬರ್ 3ರಂದು)ಜಮೆ ಆಗಲಿದೆ.</p>.<p>*</p>.<p>ಅಮರಾವತಿಯನ್ನು ಹೈದರಾಬಾದ್ಗಿಂತ ಉತ್ತಮ ನಗರವನ್ನಾಗಿಸುವುದು ನನ್ನ ಸದ್ಯದ ಕನಸು. ಇದನ್ನು ಸಾಧಿಸಿಯೇ ತೀರುತ್ತೇನೆ<br /><em><strong>ಎನ್.ಚಂದ್ರಬಾಬು ನಾಯ್ಡು, ಆಂಧ್ರ ಪ್ರದೇಶದ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್:ನಿರುದ್ಯೋಗಿ ಯುವಕರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶದಲ್ಲಿ ಪ್ರತಿ ತಿಂಗಳು ₹1,000 ನಿರುದ್ಯೋಗ ಭತ್ಯೆ ನೀಡುವ ‘ಮುಖ್ಯಮಂತ್ರಿ ಯುವ ನೇಸ್ತಂ’ ಯೋಜನೆಗೆ ಮುಖ್ಯಮಂತ್ರಿ ಎನ್.ಚಂದ್ರ ಬಾಬು ನಾಯ್ಡು ಚಾಲನೆ ನೀಡಿದರು.</p>.<p>ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಂದ ಬಂದಿರುವ ಪದವೀಧರ ನಿರುದ್ಯೋಗಿ ಯುವಕರಿ ಗೆಸೂಕ್ತ ಉದ್ಯೋಗ ದೊರಕುವವರೆಗೆ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) 2014ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ಯೋಜನೆ ಕುರಿತು ಘೋಷಣೆ ಮಾಡಿತ್ತು.</p>.<p>ಸದ್ಯ 2.07 ಲಕ್ಷ ನಿರುದ್ಯೋಗಿ ಯುವಕರು ಹೆಸರನ್ನು ನೋಂದಾಯಿ ಸಿದ್ದಾರೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಭತ್ಯೆ ಸಂದಾಯ ವಾಗಲಿದೆ. ಮೊದಲನೇ ತಿಂಗಳಿನ ಭತ್ಯೆ ಬುಧವಾರ (ಅಕ್ಟೋಬರ್ 3ರಂದು)ಜಮೆ ಆಗಲಿದೆ.</p>.<p>*</p>.<p>ಅಮರಾವತಿಯನ್ನು ಹೈದರಾಬಾದ್ಗಿಂತ ಉತ್ತಮ ನಗರವನ್ನಾಗಿಸುವುದು ನನ್ನ ಸದ್ಯದ ಕನಸು. ಇದನ್ನು ಸಾಧಿಸಿಯೇ ತೀರುತ್ತೇನೆ<br /><em><strong>ಎನ್.ಚಂದ್ರಬಾಬು ನಾಯ್ಡು, ಆಂಧ್ರ ಪ್ರದೇಶದ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>