ಕೋವಿಡ್–19ಗೆ ಒಳಗಾಗಿ ಗುಣಮುಖರಾದ ತಮಿಳುನಾಡಿನ ಅತ್ಯಂತ ಹಿರಿಯ ವ್ಯಕ್ತಿ ಇವರು ಎನ್ನಲಾಗಿದೆ. ಉದ್ವೇಗ, ಹೃದಯ ಸಂಬಂಧಿ ಕಾಯಿಲೆಯಿದ್ದ ಕೃಷ್ಣಮೂರ್ತಿ ಅವರಿಗೆ ಕೋವಿಡ್–19 ದೃಢಪಟ್ಟಿ ಕಾರಣದಿಂದಮೇ 30ರಂದು ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ ವಯಸ್ಸು ಅಡ್ಡಿಯಾಗಿದ್ದರೂ, ಆಸ್ಪತ್ರೆಯ ಸಿಬ್ಬಂದಿಯ ಪರಿಶ್ರಮದಿಂದ ಅವರು ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದಿದ್ದಾರೆ.