ನದಿ ದಂಡೆಯಲ್ಲಿ ಅರ್ಘ್ಯ ಪ್ರದಾನ ಮಾಡಿದ ಬಳಿಕ ಭಕ್ತರು ಹೊರಡಲು ಅನುವಾಗುವ ಸಂದರ್ಭದಲ್ಲಿ ದೇವಸ್ಥಾನದ ಗೋಡೆ ಕುಸಿದು ಬಿತ್ತು. ಅವಶೇಷಗಳಡಿ ಆರೇಳು ಮಂದಿ ಮಹಿಳೆಯರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸಾವನ್ನಪ್ಪಿದ ಮಹಿಳೆಯರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಠಾಣೆಯ ಮುಖ್ಯಾಧಿಕಾರಿ ಚಂದ್ರಕಾಂತ್ ಗೌರಿ ಹೇಳಿದ್ದಾರೆ.