ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವಿದೆ, ಸಿಬಿಐ ಪ್ರಮುಖ ಅಧಿಕಾರಿಗಳ ವಿರುದ್ಧವೇ ಭ್ರಷ್ಟಾಚಾರದ ಆರೋಪ ಬಂದಿದ್ದು, ವಿಶ್ವಾಸಾರ್ಹತೆಗೆ ದಕ್ಕೆಯಾಗಿದೆ ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ರಾಜ್ಯ ಪ್ರವೇಶ ಮಾಡುವುದು ಸೂಕ್ತವಲ್ಲ, ಎರಡನೇಯದಾಗಿ ರಾಜ್ಯ ಸರ್ಕಾರದ್ದೆ ಒಂದು ತನಿಖಾ ಸಂಸ್ಥೆ ಕೆಲಸ ಮಾಡುತ್ತಿದೆ, ಸಿಬಿಐ ಅಧಿಕಾರಿಗಳು ಇಲ್ಲಿಗೆ ಬಂದು ನಮ್ಮ ಅಧಿಕಾರಿಗಳ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಇದರಿಂದ ಸರ್ಕಾರದ ನಿಯಮಿತ ಕೆಲಸ ಕಾರ್ಯಗಳಿಗೂ ತೊಂದರೆಯಾಗುತ್ತದೆ ಎಂದು ಛತ್ತೀಸ್ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ ತಿಳಿಸಿದ್ದಾರೆ.