‘ಮುಖ್ಯಮಂತ್ರಿ ಭೂಪೇಶ್ ಬಘೇಲ ಅವರ ಸೂಚನೆಯ ಮೇರೆಗೆ ಗರ್ಭಿಣಿಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ. ಪೌಷ್ಟಿಕ ಆಹಾರ, ಸ್ಕ್ರೀನಿಂಗ್ ಸೌಲಭ್ಯಗಳು ಮತ್ತು ರಕ್ಷಣಾತ್ಮಕ ಸಾಧನಗಳು ಕೇಂದ್ರದಲ್ಲಿವೆ. ಇವುಗಳನ್ನು ದಿನಕ್ಕೆ ಮೂರು ಬಾರಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಕೇಂದ್ರದಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಗಳ ಕಾಲ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.