ನವದೆಹಲಿ:ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆಬಂಧಿಸಲಾಗಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ನ್ಯಾಯಾಲಯ ಸಿಬಿಐ ವಶಕ್ಕೆ ಒಪ್ಪಿಸಿದೆ.
ಸಿಬಿಐ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಚಿದಂಬರಂ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಒಪ್ಪಿಸಬೇಕು ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು.
ಆಗಸ್ಟ್ 26ರ ವರೆಗೂ ನ್ಯಾಯಾಲಯ ಸಿಬಿಐ ವಶಕ್ಕೆ ನೀಡಿದೆ. ಪಿ.ಚಿದಂಬರಂ ಪರ ವಕೀಲರು ಮತ್ತು ಅವರ ಕುಟುಂಬದವರ ಭೇಟಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿದೆ.
‘ಚಿದಂಬರಂ ಅವರು ವಿಚಾರಣೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಬೇಕು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿಚಿದಂಬರಂ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
‘ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಸಿಬಿಐ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.ಕೆಲವು ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂದ ಮಾತ್ರಕ್ಕೆ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದರ್ಥವಲ್ಲ’ ಎಂದುಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.