ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೊಮ್ಮೆ ತಾವೇ ಉದ್ಘಾಟಿಸಿದ್ದ ಸಿಬಿಐ ಕಚೇರಿಯಲ್ಲಿ ಬಂದಿಯಾದ ಚಿದಂಬರಂ

Last Updated 22 ಆಗಸ್ಟ್ 2019, 6:58 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬುಧವಾರ ರಾತ್ರಿ 9.45ರ ಸುಮಾರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿ ದೆಹಲಿಯ ಸಿಬಿಐ ಸಂಕೀರ್ಣಕ್ಕೆ ಕರೆದೊಯ್ದರು.

ಸದ್ಯ ದೆಹಲಿಯ ಸಿಬಿಐ ಕಚೇರಿಯಲ್ಲಿ ಬಂದಿಯಾಗಿರುವ ಚಿದಂಬರಂ ಅವರು ಅಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ವಿಚಿತ್ರವೆಂದರೆ, ಆ ಕಚೇರಿಯ ಉದ್ಘಾಟನೆಯನ್ನು ಚಿದಂಬರಂ ಅವರೇ ಮಾಡಿದ್ದರು!

2011ರ ಜೂನ್‌ 30ರಂದು ದೆಹಲಿಯ ಸಿಬಿಐ ಸಂಕೀರ್ಣವನ್ನು ಅಂದು ಕೇಂದ್ರ ಗೃಹ ಸಚಿವರಾಗಿದ್ದ ಚಿದಂಬರಂ, ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ನೆರವೇರಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಅಂದಿನ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಕಪಿಲ್‌ ಸಿಬಲ್‌ ಸೇರಿದಂತೆ ಹಲವು ಭಾಗವಹಿಸಿದ್ದರು.

ಉದ್ಘಾಟನಾ ಸಮಾರಂಭದ ವಿಡಿಯೊ ಇಲ್ಲಿದೆ...

ಚಿದಂಬರಂ ತಾವೇ ಉದ್ಘಾಟಿಸಿದ್ದ ಕಚೇರಿಯಲ್ಲಿ ತಾವೇ ಬಂದಿಯಾಗಿರುವುದು ಪರಿಸ್ಥಿತಿಯ ವ್ಯಂಗ್ಯವೇ ಸರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT