ಲಕ್ಷ್ಮೇಶ್ವರ: ‘ನಗರೋತ್ಥಾನ ಯೋಜನೆಯಡಿ ₹ 5.45 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಈಚೆಗೆ ಭೂಮಿಪೂಜೆ ನೆರವೇರಿಸಿದ್ದಾರೆ. ಆದರೆ, ಈ ಕಾಮಗಾರಿಗಳನ್ನು ತುಂಡು ಗುತ್ತಿಗೆ ಕೊಡಬಾರದು. ತುಂಡು ಗುತ್ತಿಗೆಯಿಂದ ಕಳಪೆ ಕಾಮಗಾರಿ ಆಗುವ ಸಾಧ್ಯತೆ ಹೆಚ್ಚಿರುತ್ತದೆ’ ಎಂದುಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಹೇಳಿದರು.