ಸುಮಾರು 40 ವರ್ಷ ವಯಸ್ಸಿನ ಬಿಂದು ಮತ್ತು ಕನಕದುರ್ಗಾ ಎಂಬುವವರು ಮುಂಜಾವ ದೇಗುಲ ಪ್ರವೇಶಿಸಿದ್ದಾರೆ. ದೇಗುಲ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಕೋಯಿಕ್ಕೋಡ್ ನಿವಾಸಿಯಾಗಿರುವ ಬಿಂದು ತಿಳಿಸಿದ್ದಾರೆ ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದೆ. 18 ಮೆಟ್ಟಿಲುಗಳನ್ನೇರಿ ದೇಗುಲ ಪ್ರವೇಶಿಸಿಲ್ಲ. ಬದಲಿಗೆ ಗಣ್ಯ ವ್ಯಕ್ತಿಗಳಿಗೆ ಮೀಸಲಾದ ಸ್ಥಳದಿಂದ ಪ್ರಾರ್ಥನೆ ಸಲ್ಲಿಸಿದ್ದೇವೆ. ಪೊಲೀಸರು ನಮ್ಮನ್ನು ಹಿಂದೆ ಕಳುಹಿಸಲು ಪ್ರಯತ್ನಿಸಿಲ್ಲ ಎಂದು ಬಿಂದು ತಿಳಿಸಿದ್ದಾರೆ ಎನ್ನಲಾಗಿದೆ.
ಋತುಮತಿಯಾಗುವ ವಯಸ್ಸಿನ ಮಹಿಳೆಯರು ದೇಗುಲ ಪ್ರವೇಶಿಸಿರುವುದರಿಂದ ಶುದ್ಧೀಕರಣಕ್ಕಾಗಿ ಶಬರಿಮಲೆ ದೇಗುಲದ ಬಾಗಿಲು ಮುಚ್ಚಲಾಗಿದೆ, ದರ್ಶನ ಸ್ಥಗಿತಗೊಂಡಿದೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
Kerala's #SabarimalaTemple shut for purification rituals. Two women devotees in their 40's had entered the temple in the early morning hours today. pic.twitter.com/jMefTpCsCE
ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಿದ್ದನ್ನು ಬಿಜೆಪಿ ಖಂಡಿಸಿದೆ. ಅಲ್ಲದೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ. ಸಿಪಿಐ(ಎಂ) ಸರ್ಕಾರದ ಪಿತೂರಿಯಿಂದಾಗಿ ಮಹಿಳೆಯರು ದೇಗುಲ ಪ್ರವೇಶಿಸುವಂತಾಗಿದೆ ಎಂದು ಬಿಜೆಪಿ ಆರೋಪಿಸಿದೆ.