ಈ ವಿಷಯ ತಿಳಿದ ಗ್ರಾಮಸ್ಥರು ಆಕೆಯನ್ನು ಅಟ್ಟಾಡಿಸಿಕೊಂಡು ಕಲ್ಲುಗಳು, ಇಟ್ಟಿಗೆಗಳಿಂದ ಹೊಡೆದಿದ್ದರು. ಗ್ರಾಮಸ್ಥರಿಂದ ಹಲ್ಲೆಗೊಳಗಾದ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ರಕ್ತಸ್ರಾವವಾಗಿ,ತೀವ್ರ ಗಾಯಗೊಂಡಿದ್ದ ಆಕೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಆರೋಪಿ ಕೊಲೆ ಪ್ರಕರಣದಲ್ಲಿ ಕಾರಾಗೃಹದಲ್ಲಿದ್ದ, ಇತ್ತೀಚೆಗಷ್ಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಎಂದು ಐಜಿಪಿ ಮೋಹಿತ್ ಅಗರವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.