ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ದಾಳಿ ಪೂರ್ವ ನಿಯೋಜಿತ, ನಿದ್ರಿಸಿದ್ದ ಸರ್ಕಾರ: ರಾಹುಲ್ ಟೀಕೆ

Last Updated 19 ಜೂನ್ 2020, 7:42 IST
ಅಕ್ಷರ ಗಾತ್ರ

ನವದೆಹಲಿ: ಲಡಾಖ್‌ನಲ್ಲಿನ ಗಾಲ್ವನ್‌ ಕಣಿವೆಯಲ್ಲಿ ಚೀನಾದ ದಾಳಿಯು ಪೂರ್ವ ನಿಯೋಜಿತ ಎಂಬುದು ಸ್ಪಷ್ಟ. ಕೇಂದ್ರ ಸರ್ಕಾರ ಗಾಢ ನಿದ್ರೆಯಲ್ಲಿದ್ದ ಕಾರಣ ಯೋಧರು ಬೆಲೆ ತೆರಬೇಕಾಯಿತು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ‌ ಟೀಕಿಸಿದ್ದಾರೆ.

ಚೀನಾ– ಭಾರತ ಗಡಿ ಪರಿಸ್ಥಿತಿ ಕುರಿತಂತೆ ಪ್ರಧಾನಿ ಮೋದಿ ಅವರ ಸಭೆಗೆ ಮೊದಲೇ ರಾಹುಲ್‌ ಅವರ ಈ ಹೇಳಿಕೆ ಹೊರಬಿದ್ದಿದೆ.

ಕಣಿವೆಯಲ್ಲಿ ಕರ್ನಲ್‌ ಸೇರಿದಂತೆ ಭಾರತದ 20 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ಗಡಿ ಭಾಗದಲ್ಲಿ ಐದು ದಶಕಗಳಲ್ಲಿ ನಡೆದ ಅತ್ಯಂತ ದೊಡ್ಡ ಸೇನಾ ಘರ್ಷಣೆ ಇದು. ಈ ಘಟನೆ ಗಡಿ ಬಿಕ್ಕಟ್ಟನ್ನು ತಾರಕಕ್ಕೆ ಏರಿಸಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕೇಂದ್ರ ಸರ್ಕಾರ ನಿದ್ರಿಸಿದ್ದು ಗಡಿಯಲ್ಲಿ ಸಮಸ್ಯೆ ಇದೆ ಎಂಬುದನ್ನು ಅಲ್ಲಗಳೆದಿತ್ತು. ಆದರೆ ಈಗ ಯೋಧರು ಬೆಲೆ ತೆರಬೇಕಾಯಿತು ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಚೀನಾದ ದಾಳಿ ಪೂರ್ವ ನಿಯೋಜಿತ ಎಂದಿರುವ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್‌ ನಾಯಕ್‌ ಅವರ ಹೇಳಿಕೆಯನ್ನೂ ಅವರು ಟ್ಯಾಗ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT