ಚಿನ್ಮಯಾನಂದ ಟ್ರಸ್ಟ್ ನಡೆಸುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿ ಆಗಸ್ಟ್ 24ರಿಂದ ನಾಪತ್ತೆಯಾಗಿದ್ದರು. ನಾಪತ್ತೆಯಾಗುವ ಮುನ್ನ, ‘ಸಂತರೊಬ್ಬರು ನನಗೆ ಕಿರುಕುಳ ನೀಡುತ್ತಿದ್ದು, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ’ ಎನ್ನುವ ಸಂದೇಶವುಳ್ಳ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ವಿಡಿಯೊದಲ್ಲಿ ಚಿನ್ಮಯಾನಂದ ಅವರ ಹೆಸರು ಪ್ರಸ್ತಾಪಿಸಿರಲಿಲ್ಲ. ಆಗಸ್ಟ್ 30ರಂದು ರಾಜಸ್ಥಾನದಲ್ಲಿ ಈ ವಿದ್ಯಾರ್ಥಿನಿಯನ್ನು ಉತ್ತರ ಪ್ರದೇಶ ಪೊಲೀಸರು ಪತ್ತೆ ಮಾಡಿದ್ದರು.