ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೌಕೀದಾರ್ 3.5 ಲಕ್ಷ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ, ರೈತರದ್ದಲ್ಲ: ರಾಹುಲ್

Last Updated 11 ಫೆಬ್ರುವರಿ 2019, 13:15 IST
ಅಕ್ಷರ ಗಾತ್ರ

ಲಖನೌ: ಪ್ರತೀ ರಕ್ಷಣಾ ಒಪ್ಪಂದಗಳಲ್ಲಿಯೂ ಒಂದಲ್ಲ ಒಂದು ರೀತಿಯ ಭ್ರಷ್ಟಾಚಾರ ನಡೆಯುತ್ತದೆ. ಅನಿಲ್ ಅಂಬಾನಿಗಾಗಿ ನರೇಂದ್ರ ಮೋದಿ ಭ್ರಷ್ಟಾಚಾರ ಮಾಡಿದ್ದಾರೆ. ಚೌಕೀದಾರ್ (ಮೋದಿ) ದೇಶದಲ್ಲಿರುವ 3.5 ಲಕ್ಷ ಕೋಟಿ ಉದ್ಯಮಿಗಳ ಸಾಲ ಮನ್ನಾಮಾಡಿದ್ದಾರೆ ರೈತರದ್ದಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನರೇಂದ್ರ ಮೋದಿ ಈ ಐದು ವರ್ಷಗಳಲ್ಲಿ ಏನು ಮಾಡಿದ್ದಾರೆಎಂಬುದನ್ನು ಜನರು ನೋಡಿದ್ದಾರೆ. ಚೌಕೀದಾರ್ 2 ಕೋಟಿ ಜನರಿಗೆ ಕೆಲಸ ಸಿಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಯಾರಿಗೂ ಕೆಲಸ ಕೊಟ್ಟಿಲ್ಲ.ಅವರು ಲಾಭ ಮಾಡಿದ್ದು ಅನಿಲ್ ಅಂಬಾನಿಗೆ ಮಾತ್ರ .ಬಿಜೆಪಿ ವಿರುದ್ಧದ ಹೋರಾಟ ಅವರ ವಿಚಾರಧಾರೆಯ ವಿರುದ್ಧದ ಹೋರಾಟವಾಗಿದೆ ಎಂದಿದ್ದಾರೆ ರಾಹುಲ್.

ಪ್ರಿಯಾಂಕಾ ಮತ್ತು ಸಿಂಧ್ಯಾ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‍ನ್ನು ಬಲಪಡಿಸುತ್ತಾರೆ ಎಂದ ರಾಹುಲ್, ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರುವ ಗುರಿ ಹೊಂದಿದೆ.

ನಾನುಮಾಯಾವತಿ ಮತ್ತು ಅಖಿಲೇಶ್ ಅವರನ್ನು ಗೌರವಿಸುತ್ತೇನೆ. ಆದರೆ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರಲು ಎಲ್ಲ ಪಕ್ಷದೊಂದಿಗೆ ಹೋರಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT