ಪೊಲೀಸ್ ಅಧಿಕಾರಿಗಳ ಪ್ರಕಾರ ಹಲ್ಲೆಕೋರರು ಬಲವಂತವಾಗಿ ಮನೆಯೊಳಗೆ ನುಗ್ಗಲು ಪ್ರಯತ್ನಿಸಿದಾಗ ಅಲ್ಲಿದ್ದ ಮಹಿಳೆಯರು ಖಾರದ ಪುಡಿ ಎರೆಚಿದ್ದಾರೆ.
ಈ ಘಟನೆ ಬಗ್ಗೆ ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ಕೆ. ರೆಹಮಾನ್ ಖಾನ್, ಬಿಜೆಪಿ ಅಧಿಕಾರಕ್ಕೇರಿದ ನಂತರ ಬಜರಂಗ ದಳ ಮತ್ತು ರಾಮ ಸೇನೆ ಪುಂಡಾಟಿಕೆ ಮಾಡುತ್ತಿದೆ.ಅವರು ಬೇರೆ ಧರ್ಮದವರನ್ನು ಗೌರವಿಸುವುದಿಲ್ಲ, ಸರ್ಕಾರ ಇದನ್ನು ನೋಡಿ ಮೂಕ ಪ್ರೇಕ್ಷಕನಂತೆ ಕುಳಿತಿದೆ ಎಂದಿದ್ದಾರೆ.