<p><strong>ಲಖನೌ: </strong>ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಹೋರಾಟ ಭಾರತದಲ್ಲಿ ಶನಿವಾರ ಮತ್ತಷ್ಟು ತೀವ್ರಗೊಂಡಿದೆ. ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವಪ್ರತಿಭಟನೆಯಲ್ಲಿ ಈ ವರೆಗೆ 15 ಮಂದಿ ಮೃತಪಟ್ಟಿದ್ದಾರೆ.</p>.<p>ಉತ್ತರ ಪ್ರದೇಶದ ಖಾನ್ಪುರದಲ್ಲಿ ಇಂದುನಡೆದ ಹೋರಾಟ ವಿಕೋಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸ್ ಪೋಸ್ಟ್ಗೆ ಬೆಂಕಿ ಹಚ್ಚಿದ್ದಾರೆ. ರಾಮ್ಪುರದಲ್ಲಿ ಹೋರಾಟಗಾರರು ಬ್ಯಾರಿಕೇಡ್ಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಪ್ರತಿಭಟನಾನಿರತರತ್ತ ಅಶೃವಾಯು ಸಿಡಿಸಿದ್ದಾರೆ.</p>.<p>ಉತ್ತರ ಪ್ರದೇಶದ ವಿಧಾನಭವನದಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆ ಕಡಿತ ಮುಂದುವರಿದಿದೆ. ಈವರೆಗೆ 705 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. </p>.<p>ದೆಹಲಿಯ ಜಾಮಿಯಾ ವಿವಿಯಲ್ಲಿ ಏಳನೇ ದಿನವೂ ಹೋರಾಟ ಮುಂದುವರಿದಿತ್ತು. ಹಳೆ ದೆಹಲಿಯಲ್ಲಿ ಶುಕ್ರವಾರ ನಡೆದಿದ್ದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 15 ಮಂದಿಯನ್ನು ಬಂಧಿಸಿದ್ದಾರೆ. ಘರ್ಷಣೆಯಲ್ಲಿ 35 ಮಂದಿ ಗಾಯಗೊಂಡಿದ್ದರು.</p>.<p>ಶುಕ್ರವಾರ ದೆಹಲಿಯ ಜಮಾ ಮಸೀದಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಪೊಲೀಸರು ಬಂಧಿಸಿದ್ದರು. ಶನಿವಾರ ಅವರನ್ನು ಹದಿನೈದು ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. </p>.<p>ಮಧ್ಯಪ್ರದೇಶದ ಜಭಲ್ಪುರದಲ್ಲೂ ಹೋರಾಟಗಳು ನಡೆಯುತ್ತಿದ್ದು, ಅಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.</p>.<p>ಬಿಹಾರದ ಪಟಣದಲ್ಲಿ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರು ಬೃಹತ್ ಪ್ರತಿಭಟನೆ ನಡೆಸಿ, ಪೌರತ್ವ ಕಾಯ್ದೆ ವಿರೋಧಿಸಿದರು.</p>.<p><strong>ಟಿಎಂಸಿ ಸಂಸದರಿಂದ ಮೃತರ ಕುಟುಂಬಗಳ ಭೇಟಿ</strong></p>.<p>ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವಹೋರಾಟದಲ್ಲಿ ಪೊಲೀಸರ ಗುಂಡಿಗೆ ಬಲಿಯಾದವರ ಕುಟುಂಬಗಳನ್ನುಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ನ ನಾಲ್ವರು ಸಂಸದರ ನಿಯೋಗ ಭಾನುವಾರ ಭೇಟಿಯಾಗಿದೆ. ಸಂಸದ ದಿನೇಶ್ ತ್ರಿವೇದಿ ಅವರು ನಿಯೋಗದ ನೇತೃತ್ವ ವಹಿಸಿದ್ದಾರೆ.</p>.<p><strong>ಬಂದೂಕಿಗೆ ಬಂದೂಕಿನಿಂದಲೇ ಉತ್ತರ: ಮಂಗಳೂರು ಘಟನೆ ಕುರಿತು ತಮಿಳುನಾಡಿನ ಬಿಜೆಪಿ ನಾಯಕನ ವಿವಾದಿತ ಹೇಳಿಕೆ</strong></p>.<p>ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಅನ್ನು ಸಮರ್ಥಿಸಿಕೊಂಡಿರುವ ತಮಿಳುನಾಡಿನ ಬಿಜೆಪಿ ನಾಯಕ ಎಚ್. ರಾಜಾ, ‘ನಾವು ಬಂದೂಕುಗಳಿಗೆ ಬಂದೂಕುಗಳ ಮೂಲಕವೇ ಉತ್ತರ ನೀಡುತ್ತೇವೆ. ಅವರೆಲ್ಲರೂ ನೂರಾರು ಮಂದಿಯನ್ನು ಕೊಲ್ಲುವುದರಲ್ಲಿದ್ದರು. ಹೀಗಾಗಿ ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ,’ ಎಂದು ರಾಜಾ ಹೇಳಿದ್ದಾರೆ.</p>.<p>ಇದೇ ವೇಳೆ ತಮಿಳುನಾಡಿನ ಚೆನ್ನೈನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ತೀವ್ರ ಹೋರಾಟಗಳೂ ನಡೆದವು. ಚೆನ್ನೈನ ಎಂಜಿಆರ್ ಕೇಂದ್ರ ರೈಲ್ವೇ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ವೇಳೆ ಪೊಲೀಸರು ಮತ್ತು ಹೋರಾಟಗಾರರ ನಡುವೆ ಘರ್ಷಣೆ ಸಂಭವಿಸಿತು. ಪ್ರತಿಭಟನಾಕಾರರು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಮಂಗಳೂರಿನಲ್ಲಿ ಗೋಲಿಬಾರ್ ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡಕ್ಕೆ ಹೊಂದಿಕೊಂಡಿರುವ ಕೇರಳದ ಕೆಲ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಹೋರಾಟ ಭಾರತದಲ್ಲಿ ಶನಿವಾರ ಮತ್ತಷ್ಟು ತೀವ್ರಗೊಂಡಿದೆ. ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವಪ್ರತಿಭಟನೆಯಲ್ಲಿ ಈ ವರೆಗೆ 15 ಮಂದಿ ಮೃತಪಟ್ಟಿದ್ದಾರೆ.</p>.<p>ಉತ್ತರ ಪ್ರದೇಶದ ಖಾನ್ಪುರದಲ್ಲಿ ಇಂದುನಡೆದ ಹೋರಾಟ ವಿಕೋಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸ್ ಪೋಸ್ಟ್ಗೆ ಬೆಂಕಿ ಹಚ್ಚಿದ್ದಾರೆ. ರಾಮ್ಪುರದಲ್ಲಿ ಹೋರಾಟಗಾರರು ಬ್ಯಾರಿಕೇಡ್ಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಪ್ರತಿಭಟನಾನಿರತರತ್ತ ಅಶೃವಾಯು ಸಿಡಿಸಿದ್ದಾರೆ.</p>.<p>ಉತ್ತರ ಪ್ರದೇಶದ ವಿಧಾನಭವನದಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆ ಕಡಿತ ಮುಂದುವರಿದಿದೆ. ಈವರೆಗೆ 705 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. </p>.<p>ದೆಹಲಿಯ ಜಾಮಿಯಾ ವಿವಿಯಲ್ಲಿ ಏಳನೇ ದಿನವೂ ಹೋರಾಟ ಮುಂದುವರಿದಿತ್ತು. ಹಳೆ ದೆಹಲಿಯಲ್ಲಿ ಶುಕ್ರವಾರ ನಡೆದಿದ್ದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 15 ಮಂದಿಯನ್ನು ಬಂಧಿಸಿದ್ದಾರೆ. ಘರ್ಷಣೆಯಲ್ಲಿ 35 ಮಂದಿ ಗಾಯಗೊಂಡಿದ್ದರು.</p>.<p>ಶುಕ್ರವಾರ ದೆಹಲಿಯ ಜಮಾ ಮಸೀದಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಪೊಲೀಸರು ಬಂಧಿಸಿದ್ದರು. ಶನಿವಾರ ಅವರನ್ನು ಹದಿನೈದು ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. </p>.<p>ಮಧ್ಯಪ್ರದೇಶದ ಜಭಲ್ಪುರದಲ್ಲೂ ಹೋರಾಟಗಳು ನಡೆಯುತ್ತಿದ್ದು, ಅಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.</p>.<p>ಬಿಹಾರದ ಪಟಣದಲ್ಲಿ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರು ಬೃಹತ್ ಪ್ರತಿಭಟನೆ ನಡೆಸಿ, ಪೌರತ್ವ ಕಾಯ್ದೆ ವಿರೋಧಿಸಿದರು.</p>.<p><strong>ಟಿಎಂಸಿ ಸಂಸದರಿಂದ ಮೃತರ ಕುಟುಂಬಗಳ ಭೇಟಿ</strong></p>.<p>ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವಹೋರಾಟದಲ್ಲಿ ಪೊಲೀಸರ ಗುಂಡಿಗೆ ಬಲಿಯಾದವರ ಕುಟುಂಬಗಳನ್ನುಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ನ ನಾಲ್ವರು ಸಂಸದರ ನಿಯೋಗ ಭಾನುವಾರ ಭೇಟಿಯಾಗಿದೆ. ಸಂಸದ ದಿನೇಶ್ ತ್ರಿವೇದಿ ಅವರು ನಿಯೋಗದ ನೇತೃತ್ವ ವಹಿಸಿದ್ದಾರೆ.</p>.<p><strong>ಬಂದೂಕಿಗೆ ಬಂದೂಕಿನಿಂದಲೇ ಉತ್ತರ: ಮಂಗಳೂರು ಘಟನೆ ಕುರಿತು ತಮಿಳುನಾಡಿನ ಬಿಜೆಪಿ ನಾಯಕನ ವಿವಾದಿತ ಹೇಳಿಕೆ</strong></p>.<p>ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಅನ್ನು ಸಮರ್ಥಿಸಿಕೊಂಡಿರುವ ತಮಿಳುನಾಡಿನ ಬಿಜೆಪಿ ನಾಯಕ ಎಚ್. ರಾಜಾ, ‘ನಾವು ಬಂದೂಕುಗಳಿಗೆ ಬಂದೂಕುಗಳ ಮೂಲಕವೇ ಉತ್ತರ ನೀಡುತ್ತೇವೆ. ಅವರೆಲ್ಲರೂ ನೂರಾರು ಮಂದಿಯನ್ನು ಕೊಲ್ಲುವುದರಲ್ಲಿದ್ದರು. ಹೀಗಾಗಿ ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ,’ ಎಂದು ರಾಜಾ ಹೇಳಿದ್ದಾರೆ.</p>.<p>ಇದೇ ವೇಳೆ ತಮಿಳುನಾಡಿನ ಚೆನ್ನೈನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ತೀವ್ರ ಹೋರಾಟಗಳೂ ನಡೆದವು. ಚೆನ್ನೈನ ಎಂಜಿಆರ್ ಕೇಂದ್ರ ರೈಲ್ವೇ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ವೇಳೆ ಪೊಲೀಸರು ಮತ್ತು ಹೋರಾಟಗಾರರ ನಡುವೆ ಘರ್ಷಣೆ ಸಂಭವಿಸಿತು. ಪ್ರತಿಭಟನಾಕಾರರು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಮಂಗಳೂರಿನಲ್ಲಿ ಗೋಲಿಬಾರ್ ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡಕ್ಕೆ ಹೊಂದಿಕೊಂಡಿರುವ ಕೇರಳದ ಕೆಲ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>