<p><strong>ನವದೆಹಲಿ:</strong> ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟಗಳು ತೀವ್ರವಾಗುತ್ತಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ಭದ್ರತೆಗೆ ಸಂಬಂಧಿಸಿದಂತೆ ಗುರುವಾರಸಂಜೆ ಗೃಹ ಇಲಾಖೆಯಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಭದ್ರತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.</p>.<p>ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಗೃಹ ಖಾತೆ ರಾಜ್ಯ ಸಚಿವ ಕಿಶನ್ ಕುಮಾರ್ ರೆಡ್ಡಿ, ಗೃಹ ಸಚಿವಾಲಾಯದ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಈ ಸಭೆಯಲ್ಲಿ ಇರಲಿದ್ದಾರೆ.</p>.<p>ಉನ್ನತ ಮಟ್ಟದ ಅಧಿಕಾರಿಗಳೊಂದಿಗಿನ ಈ ಸಭೆಯಲ್ಲಿ ದೇಶದ ಭದ್ರತೆಯ ಕುರಿತು ಪರಾಮರ್ಶೆ ನಡೆಯಲಿದೆ.</p>.<p>ಉತ್ತರ ಭಾರತದಲ್ಲಿ... ಅದರಲ್ಲೂ, ರಾಷ್ಟ್ರ ರಾಜಧಾನಿ ಕೇಂದ್ರಿತವಾಗಿದ್ದ ಪ್ರತಿಭಟನೆಗಳು ಗುರುವಾರ ಕರ್ನಾಟಕವನ್ನೂ ಆವರಿಸಿವೆ. ಎಲ್ಲ ಜಿಲ್ಲೆಗಳಲ್ಲೂ ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಗಳು ನಡೆದಿವೆ.</p>.<p>ಬೆಂಗಳೂರಿನಲ್ಲಿ ಹೋರಾಟ ನಿರತ ಇತಿಹಾಸಜ್ಞ ರಾಮಚಂದ್ರ ಗುಹಾ ಅವರ ಬಂಧನವೂ ನಡೆದಿದ್ದು, ಈ ಬೆಳವಣಿಗೆ ರಾಷ್ಟ್ರದ ಗಮನ ಸೆಳೆಯಿತು.</p>.<p>ಪ್ರತಿಭಟನೆ ವ್ಯಾಪಕವಾಗುತ್ತಿರುವ ಮುನ್ಸೂಚನೆ ಅರಿತಿರುವ ಅಮಿತ್ ಶಾ ಇದೇ ಹಿನ್ನೆಲೆಯಲ್ಲಿ ಗುರುವಾರ ಮಹತ್ವದ ಸಭೆ ನಡೆಸಲು ಉದ್ದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟಗಳು ತೀವ್ರವಾಗುತ್ತಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ಭದ್ರತೆಗೆ ಸಂಬಂಧಿಸಿದಂತೆ ಗುರುವಾರಸಂಜೆ ಗೃಹ ಇಲಾಖೆಯಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಭದ್ರತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.</p>.<p>ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಗೃಹ ಖಾತೆ ರಾಜ್ಯ ಸಚಿವ ಕಿಶನ್ ಕುಮಾರ್ ರೆಡ್ಡಿ, ಗೃಹ ಸಚಿವಾಲಾಯದ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಈ ಸಭೆಯಲ್ಲಿ ಇರಲಿದ್ದಾರೆ.</p>.<p>ಉನ್ನತ ಮಟ್ಟದ ಅಧಿಕಾರಿಗಳೊಂದಿಗಿನ ಈ ಸಭೆಯಲ್ಲಿ ದೇಶದ ಭದ್ರತೆಯ ಕುರಿತು ಪರಾಮರ್ಶೆ ನಡೆಯಲಿದೆ.</p>.<p>ಉತ್ತರ ಭಾರತದಲ್ಲಿ... ಅದರಲ್ಲೂ, ರಾಷ್ಟ್ರ ರಾಜಧಾನಿ ಕೇಂದ್ರಿತವಾಗಿದ್ದ ಪ್ರತಿಭಟನೆಗಳು ಗುರುವಾರ ಕರ್ನಾಟಕವನ್ನೂ ಆವರಿಸಿವೆ. ಎಲ್ಲ ಜಿಲ್ಲೆಗಳಲ್ಲೂ ಗುರುವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಗಳು ನಡೆದಿವೆ.</p>.<p>ಬೆಂಗಳೂರಿನಲ್ಲಿ ಹೋರಾಟ ನಿರತ ಇತಿಹಾಸಜ್ಞ ರಾಮಚಂದ್ರ ಗುಹಾ ಅವರ ಬಂಧನವೂ ನಡೆದಿದ್ದು, ಈ ಬೆಳವಣಿಗೆ ರಾಷ್ಟ್ರದ ಗಮನ ಸೆಳೆಯಿತು.</p>.<p>ಪ್ರತಿಭಟನೆ ವ್ಯಾಪಕವಾಗುತ್ತಿರುವ ಮುನ್ಸೂಚನೆ ಅರಿತಿರುವ ಅಮಿತ್ ಶಾ ಇದೇ ಹಿನ್ನೆಲೆಯಲ್ಲಿ ಗುರುವಾರ ಮಹತ್ವದ ಸಭೆ ನಡೆಸಲು ಉದ್ದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>