ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುವಾಹಟಿ| ಪೌರತ್ವ ಮಸೂದೆ ವಿರೋಧಿ ಪ್ರತಿಭಟನಕಾರರ ಮೇಲೆ ಗುಂಡು: 2 ಸಾವು

Last Updated 12 ಡಿಸೆಂಬರ್ 2019, 14:36 IST
ಅಕ್ಷರ ಗಾತ್ರ

ಗುವಾಹಟಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಗುಂಡು ತಾಗಿ ಇಬ್ಬರು ಪ್ರತಿಭಟನಕಾರರು ಸಾವಿಗೀಡಾಗಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಜನರು ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಅಸ್ಸಾಂ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ಜ್ಯೋತಿ ಮಹಾಂತ ವಿನಂತಿಸಿದ್ದಾರೆ.

ಪ್ರತಿಭಟನೆ ಬಗ್ಗೆ ಪ್ರಚೋದನಾತ್ಮಕ ದೃಶ್ಯಗಳನ್ನು ಅಥವಾ ವರದಿಗಳನ್ನು ಬಿತ್ತರಿಸಬೇಡಿ ಎಂದು ಮಹಾಂತಾ ಮಾಧ್ಯಮಗಳಿಗೆ ಒತ್ತಾಯಿಸಿದ್ದಾರೆ.

ಕೆಲವು ದುಷ್ಟ ಶಕ್ತಿಗಳು ಮತ್ತು ರಾಜಕೀಯ ನಂಟು ಹೊಂದಿರುವವರು ರಾಜ್ಯದಲ್ಲಿ ಗಲಭೆಯ್ನುಂಟು ಮಾಡಲು ಯತ್ನಿಸುತ್ತಿದ್ದಾರೆ. ಪ್ರತಿಭಟನೆಗಳು ಪ್ರಜಾಸತ್ತಾತ್ಮಕವಾಗಿದ್ದರೆ ನಾವೇನೂ ಮಾಡಲಾರೆವು. ಜನರು ಕಾನೂನು ಕೈಗೆತ್ತಿಕೊಂಡು ಕ್ಷೋಭೆಯನ್ನುಂಟು ಮಾಡಬೇಡಿ ಎಂದು ನಾನು ವಿನಂತಿಸುತ್ತಿದ್ದೇನೆ ಎಂದು ಮಹಾಂತ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಪ್ರತಿಭಟನಕಾರರುಮಾಡುತ್ತಿರುವ ದಾಳಿ ಒಳ್ಳೆಯದಲ್ಲ. ಜನರು ಕಾನೂನು ಕೈಗೆತ್ತಿಕೊಂಡರೆ ಅದು ಸಮಸ್ಯೆಯನ್ನು ಸೃಷ್ಟಿಸುತ್ತದೆ ಎಂದು ಮಹಾಂತ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT