ಅಸ್ಸಾಂ, ಅರುಣಾಚಲಪ್ರದೇಶ ಹಾಗೂ ಮೇಘಾಲಯದ ವಿವಿಧ ರಾಜಕೀಯ ಪಕ್ಷಗಳ ನಾಯಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಶಾ ಸಭೆ ನಡೆಸಿದರು. ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನವಾಲ್, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು, ಮೇಘಾಲಯದ ಮುಖ್ಯಮಂತ್ರಿ ಕೊನ್ರಾಡ್ ಸಂಗ್ಮಾ, ಕೇಂದ್ರದ ಕ್ರೀಡಾ ಸಚಿವ ಕಿರಣ್ ರಿಜಿಜು ಹಾಗೂ ಕೆಲವು ಸಂಸದರು ಸಭೆಯಲ್ಲಿ ಪಾಲ್ಗೊಂಡು ಮಸೂದೆಯನ್ನು ಕುರಿತ ತಮ್ಮ ಆತಂಕಗಳನ್ನು ಹೇಳಿಕೊಂಡರು.