<p>ಈಶಾನ್ಯ ದೆಹಲಿಯಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆಯ ಪರ–ವಿರುದ್ಧ ಹೋರಾಟಗಾರರ ನಡುವೆನಡೆದ ಘರ್ಷಣೆಯಲ್ಲಿ ಮೃತಪಟ್ಟ ನಾಲ್ವರು ನಾಗರಿಕರ ದೇಹಗಳ ಮೇಲೆ ಗುಂಡೇಟಿನ ಕುರುಹುಗಳು ಪತ್ತೆಯಾಗಿವೆ.ಮೃತ ಪೊಲೀಸ್ ಹೆಡ್ಕಾನ್ಸ್ಟೆಬಲ್ ಸಾವಿಗೆ ಕಲ್ಲೇಟಿನಿಂದ ತಲೆಗೆ ಆದ ಗಾಯ ಕಾರಣ. ಗಾಯಗೊಂಡವರಲ್ಲಿಯೂ ಬಹುತೇಕರು ಗುಂಡೇಟು ತಿಂದಿದ್ದಾರೆ.</p>.<p>ಗಾಯಗೊಂಡವರ ನಿಖರ ಸಂಖ್ಯೆ ತಿಳಿಸಲು ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯ ವೈದ್ಯರಿಗೆ ಸಾಧ್ಯವಾಗಿಲ್ಲ. ಸೋಮವಾರ ರಾತ್ರಿಯವರೆಗೆ ಸುಮಾರು 57 ಗಾಯಾಳುಗಳನ್ನು ಕರೆತರಲಾಯಿತು. ಈ ಪೈಕಿ ಬಹುತೇಕರು ಚಿಂತಾಜನಕ ಸ್ಥಿತಿಯಲ್ಲಿದ್ದರು ಎಂದು ಹೆಸರು ಹೇಳಲು ಇಚ್ಛಿಸದ ವೈದ್ಯರ ಹೇಳಿಕೆ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.</p>.<p>ಬಹುತೇಕರ ಮೈಮೇಲೆ ಗುಂಡೇಟಿನ ಮತ್ತು ಕಲ್ಲೇಟಿನ ಗಾಯಗಳಿದ್ದವು. ಕೆಲವರಿಗೆಇರಿತದ ಗಾಯಗಳಾಗಿದ್ದವು. ಒಬ್ಬ ವ್ಯಕ್ತಿಗೆಪೆಟ್ರೋಲ್ ಬಾಂಬ್ನಿಂದ ತೀವ್ರ ಸುಟ್ಟಗಾಯಗಳಾಗಿವೆ.ಆಸ್ಪತ್ರೆ ಸುತ್ತಮುತ್ತಲೂ ಬಿಗಿಪಹರೆ ಹಾಕಲಾಗಿದೆ. ಕೇವಲ ಗಾಯಾಳುಗಳನ್ನು ಮಾತ್ರ ಒಳಗೆ ಬಿಡಲಾಗುತ್ತಿದೆ ಎಂದು ವರದಿಗಳು ಹೇಳಿವೆ.</p>.<p>ಮೃತರ ಸಂಬಂಧಿಕರು ಶವ ಗುರುತಿಸಿ, ಅಗತ್ಯ ದಾಖಲೆಗಳಿಗೆ ಸಹಿಹಾಕಿದ ನಂತರ ಶವಪರೀಕ್ಷೆ ನಡೆಯಲಿದೆ. ನಂತರ ಅಧಿಕೃತವಾಗಿ ವೈದ್ಯರು ಸಾವಿನ ಕಾರಣ ಪ್ರಕಟಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈಶಾನ್ಯ ದೆಹಲಿಯಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆಯ ಪರ–ವಿರುದ್ಧ ಹೋರಾಟಗಾರರ ನಡುವೆನಡೆದ ಘರ್ಷಣೆಯಲ್ಲಿ ಮೃತಪಟ್ಟ ನಾಲ್ವರು ನಾಗರಿಕರ ದೇಹಗಳ ಮೇಲೆ ಗುಂಡೇಟಿನ ಕುರುಹುಗಳು ಪತ್ತೆಯಾಗಿವೆ.ಮೃತ ಪೊಲೀಸ್ ಹೆಡ್ಕಾನ್ಸ್ಟೆಬಲ್ ಸಾವಿಗೆ ಕಲ್ಲೇಟಿನಿಂದ ತಲೆಗೆ ಆದ ಗಾಯ ಕಾರಣ. ಗಾಯಗೊಂಡವರಲ್ಲಿಯೂ ಬಹುತೇಕರು ಗುಂಡೇಟು ತಿಂದಿದ್ದಾರೆ.</p>.<p>ಗಾಯಗೊಂಡವರ ನಿಖರ ಸಂಖ್ಯೆ ತಿಳಿಸಲು ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯ ವೈದ್ಯರಿಗೆ ಸಾಧ್ಯವಾಗಿಲ್ಲ. ಸೋಮವಾರ ರಾತ್ರಿಯವರೆಗೆ ಸುಮಾರು 57 ಗಾಯಾಳುಗಳನ್ನು ಕರೆತರಲಾಯಿತು. ಈ ಪೈಕಿ ಬಹುತೇಕರು ಚಿಂತಾಜನಕ ಸ್ಥಿತಿಯಲ್ಲಿದ್ದರು ಎಂದು ಹೆಸರು ಹೇಳಲು ಇಚ್ಛಿಸದ ವೈದ್ಯರ ಹೇಳಿಕೆ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.</p>.<p>ಬಹುತೇಕರ ಮೈಮೇಲೆ ಗುಂಡೇಟಿನ ಮತ್ತು ಕಲ್ಲೇಟಿನ ಗಾಯಗಳಿದ್ದವು. ಕೆಲವರಿಗೆಇರಿತದ ಗಾಯಗಳಾಗಿದ್ದವು. ಒಬ್ಬ ವ್ಯಕ್ತಿಗೆಪೆಟ್ರೋಲ್ ಬಾಂಬ್ನಿಂದ ತೀವ್ರ ಸುಟ್ಟಗಾಯಗಳಾಗಿವೆ.ಆಸ್ಪತ್ರೆ ಸುತ್ತಮುತ್ತಲೂ ಬಿಗಿಪಹರೆ ಹಾಕಲಾಗಿದೆ. ಕೇವಲ ಗಾಯಾಳುಗಳನ್ನು ಮಾತ್ರ ಒಳಗೆ ಬಿಡಲಾಗುತ್ತಿದೆ ಎಂದು ವರದಿಗಳು ಹೇಳಿವೆ.</p>.<p>ಮೃತರ ಸಂಬಂಧಿಕರು ಶವ ಗುರುತಿಸಿ, ಅಗತ್ಯ ದಾಖಲೆಗಳಿಗೆ ಸಹಿಹಾಕಿದ ನಂತರ ಶವಪರೀಕ್ಷೆ ನಡೆಯಲಿದೆ. ನಂತರ ಅಧಿಕೃತವಾಗಿ ವೈದ್ಯರು ಸಾವಿನ ಕಾರಣ ಪ್ರಕಟಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>