ಬೆಂಗಳೂರು: ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಲಾಕ್ ಡೌನ್ ಅವಧಿಯನ್ನು ಎರಡು ವಾರಗಳ ಕಾಲ ವಿಸ್ತರಿಸಿದೆ. ಈ ಅವಧಿಯಲ್ಲಿ ಕಿತ್ತಳೆ ವಲಯದಲ್ಲಿನ ಸಂಚಾರದ ಬಗ್ಗೆ ಇರಬಹುದಾದ ಗೊಂದಲಗಳನ್ನು ನಿವಾರಿಸುವ ಪ್ರಯತ್ನ ಮಾಡಿದೆ ಕೇಂದ್ರ ಸರ್ಕಾರ.
ಅದರಂತೆ ಕಿತ್ತಳೆ ವಲಯದ ವ್ಯಾಪ್ತಿಯಲ್ಲಿ ಜಿಲ್ಲೆಗಳ ಒಳಗಿನ ಮತ್ತು ಹೊರಗಿನ ಬಸ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
— Spokesperson, Ministry of Home Affairs (@PIBHomeAffairs) May 2, 2020
ಟ್ಯಾಕ್ಸಿ, ಕ್ಯಾಬ್ಗಳಿಗೆ ಷರತ್ತು ಬದ್ಧ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಒಬ್ಬ ಚಾಲಕ, ಇಬ್ಬರು ಪ್ರಯಾಣಿಕರು ಟ್ಯಾಕ್ಸಿ, ಕ್ಯಾಬ್ಗಳಲ್ಲಿ ಪ್ರಯಾಣಿಸಬಹುದು.
ಅನುಮತಿ ನೀಡಲಾದ ಚಟುವಟಿಕೆಗಳಿಗೆ ಮಾತ್ರ ವ್ಯಕ್ತಿಗಳು ಮತ್ತು ವಾಹನಗಳ ಅಂತರ ಜಿಲ್ಲಾ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಲ್ಕು ಚಕ್ರಗಳ ವಾಹನದಲ್ಲಿ ಚಾಲಕನ ಜೊತೆಗೆಇಬ್ಬರು ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ.