<p><strong>ಚೆನ್ನೈ </strong>: ಕೋವಿಡ್–19 ವ್ಯಾಪಕಗೊಳ್ಳುತ್ತಿರುವ ಕಾರಣ ತಮಿಳುನಾಡಿನಲ್ಲಿ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಬಡ್ತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.</p>.<p>ಜೂನ್ 15ರಿಂದ ಆರಂಭವಾಗಬೇಕಿದ್ದ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಅಂತೆಯೇ 11ನೇ ತರಗತಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ ವಿಷಯಗಳ ಪರೀಕ್ಷೆಗಳನ್ನೂ ರದ್ದುಪಡಿಸಲಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು, ಅವರಿಗೆ ಬಡ್ತಿ ನೀಡಲಾಗಿದೆ ಎಂದು ಅವರು ಘೋಷಿಸಿದರು.</p>.<p><strong>ಇದನ್ನೂ ಓದಿ</strong>:<a href="www.prajavani.net/technology/social-media/coronavirus-tamil-nadu-cancels-class10-exam-all-pass-trends-734899.html" target="_blank">ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆ ರದ್ದು; ಟ್ವಿಟರ್ನಲ್ಲಿ AllPass ಟ್ರೆಂಡ್</a></p>.<p>ಚೆನ್ನೈ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಕೋವಿಡ್- 19 ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದರು. ಅಲ್ಲದೆ ಈ ಸಂಬಂಧ ಪೋಷಕರೂ ಮನವಿ ಮಾಡಿದ್ದರು. ಸಾಂಕ್ರಾಮಿಕ ರೋಗ ತಜ್ಞರ ಅಭಿಪ್ರಾಯವನ್ನೂ ಕೇಳಲಾಗಿದೆ ಎಂದು ಅವರು ತಿಳಿಸಿದರು.</p>.<p>ತೆಲಂಗಾಣ ರಾಜ್ಯದಲ್ಲೂ ಕೋವಿಡ್ ಹಿನ್ನೆಲೆಯಲ್ಲಿ, 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೇ, ಉತ್ತೀರ್ಣಗೊಳಿಸಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಅವರು ಸೋಮವಾರ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ </strong>: ಕೋವಿಡ್–19 ವ್ಯಾಪಕಗೊಳ್ಳುತ್ತಿರುವ ಕಾರಣ ತಮಿಳುನಾಡಿನಲ್ಲಿ 10ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಬಡ್ತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.</p>.<p>ಜೂನ್ 15ರಿಂದ ಆರಂಭವಾಗಬೇಕಿದ್ದ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಅಂತೆಯೇ 11ನೇ ತರಗತಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ ವಿಷಯಗಳ ಪರೀಕ್ಷೆಗಳನ್ನೂ ರದ್ದುಪಡಿಸಲಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು, ಅವರಿಗೆ ಬಡ್ತಿ ನೀಡಲಾಗಿದೆ ಎಂದು ಅವರು ಘೋಷಿಸಿದರು.</p>.<p><strong>ಇದನ್ನೂ ಓದಿ</strong>:<a href="www.prajavani.net/technology/social-media/coronavirus-tamil-nadu-cancels-class10-exam-all-pass-trends-734899.html" target="_blank">ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆ ರದ್ದು; ಟ್ವಿಟರ್ನಲ್ಲಿ AllPass ಟ್ರೆಂಡ್</a></p>.<p>ಚೆನ್ನೈ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಕೋವಿಡ್- 19 ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದರು. ಅಲ್ಲದೆ ಈ ಸಂಬಂಧ ಪೋಷಕರೂ ಮನವಿ ಮಾಡಿದ್ದರು. ಸಾಂಕ್ರಾಮಿಕ ರೋಗ ತಜ್ಞರ ಅಭಿಪ್ರಾಯವನ್ನೂ ಕೇಳಲಾಗಿದೆ ಎಂದು ಅವರು ತಿಳಿಸಿದರು.</p>.<p>ತೆಲಂಗಾಣ ರಾಜ್ಯದಲ್ಲೂ ಕೋವಿಡ್ ಹಿನ್ನೆಲೆಯಲ್ಲಿ, 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೇ, ಉತ್ತೀರ್ಣಗೊಳಿಸಲಾಗುವುದು ಎಂದು ಅಲ್ಲಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಅವರು ಸೋಮವಾರ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>