‘ಮಠದಲ್ಲಿ ನೀಡುತ್ತಿದ್ದ ರೀತಿಯಲ್ಲಿಯೇ ಸ್ವಾಮೀಜಿಯವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶದಲ್ಲಿನ ಸೋಂಕು ಕಡಿಮೆ ಆಗಿದೆ. ಆದರೆ, ‘ಅಲ್ಬುಮಿನ್’ ಪ್ರೊಟೀನ್ ಅಂಶ ಸುಧಾರಿಸುತ್ತಿಲ್ಲ. ಇದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿದೆ. ದ್ರವರೂಪದ ಆಹಾರ ತೆಗೆದುಕೊಳ್ಳುತ್ತಿದ್ದಾರೆ. ಕುರ್ಚಿಯಲ್ಲಿ ಕುಳಿತುಕೊಂಡೇ ಇಷ್ಟಲಿಂಗ ಪೂಜೆ ಮಾಡಿದ್ದಾರೆ’ ಎಂದು ಸಿದ್ಧಗಂಗಾ ಆಸ್ಪತ್ರೆ ಮುಖ್ಯಸ್ಥ ಡಾ.ಪರಮೇಶ್ ವಿವರಿಸಿದರು.