<p><strong>ತಿರುವನಂತಪುರ: </strong>ವೈದ್ಯಕೀಯ ಚಿಕಿತ್ಸೆ ಪಡೆಯಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭಾನುವಾರ ಬೆಳಿಗ್ಗೆ ಅಮೆರಿಕಕ್ಕೆ ತೆರಳಿದರು. ಪತ್ನಿ ಕಮಲಾ ಕೂಡ ಜೊತೆಗಿದ್ದರು.</p>.<p>ಮಿನ್ನೆಸೊಟಾದ ರೊಚ್ಸ್ಟರ್ನಲ್ಲಿರುವ ಮೆಯೊ ಕ್ಲಿನಿಕ್ಗೆ ವಿಜಯನ್ ಅವರು ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ. ಈ ಹಿಂದೆ ನಿಗದಿಯಾದಂತೆ, ಆಗಸ್ಟ್ 19ರಂದೇ ಅವರು ಅಮೆರಿಕಕ್ಕೆ ತೆರಳಬೇಕಿತ್ತು. ಆಗಸ್ಟ್ 8ರಂದು ರಾಜ್ಯದಲ್ಲಿ ಕಾಣಿಸಿಕೊಂಡ ಭೀಕರ ಪ್ರವಾಹದ ಕಾರಣ ಪ್ರವಾಸವನ್ನು 10 ದಿನಗಳ ಕಾಲ ಮುಂದೂಡಿದ್ದರು.</p>.<p>ವಿಜಯನ್ ಅವರು ಮೂರು ವಾರಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆ. ಆದರೆ ಯಾವ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ನೀಡಲು ಸರ್ಕಾರ ನಿರಾಕರಿಸಿದೆ.</p>.<p>ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಸಂಪುಟಕ್ಕೆ ಮರುಸೇರ್ಪಡೆಯಾದ ಸಚಿವ ಇ.ಪಿ.ಜಯರಾಜನ್ ಅವರು ಸಂಪುಟ ಸಭೆ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ದೇಣಿಗೆಯನ್ನು ಸ್ವೀಕರಿಸಲಿದ್ದಾರೆ.</p>.<p>ಕೇರಳ ರಾಜ್ಯಪಾಲ ಪಿ.ಸದಾಶಿವಂ ಅವರನ್ನುಶನಿವಾರ ರಾಜಭವನದಲ್ಲಿ ಭೇಟಿಯಾದ ವಿಜಯನ್ ಅವರು ಪ್ರವಾಸದ ಕುರಿತಂತೆ ಮಾಹಿತಿ ನೀಡಿದರು. ಅಲ್ಲದೇ, ಪ್ರವಾಹಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಲಾದ ಪರಿಹಾರ ಕಾರ್ಯ, ಪುನರ್ ನಿರ್ಮಾಣ ಕೆಲಸಗಳ ಬಗ್ಗೆ ವಿವರಣೆ ನೀಡಿದರು.</p>.<p>ದೇಣಿಗೆ ಸ್ವೀಕಾರ: ಪುನರ್ ನಿರ್ಮಾಣ ಕೈಗೊಳ್ಳಲು ಅನಿವಾಸಿ ಕೇರಳಿಯರಿಂದ ನೆರವು ಪಡೆಯಲು 14 ದೇಶಗಳಲ್ಲಿ ಕಾರ್ಯಕ್ರಮ ನಡೆಸಲು ಕೇರಳ ಸರ್ಕಾರ ಮುಂದಾಗಿದೆ. ಇದಲ್ಲದೇ ಸೆಪ್ಟೆಂಬರ್ 10ರಿಂದ 15ರ ತನಕ ರಾಜ್ಯದ 14 ಜಿಲ್ಲೆಗಳಲ್ಲಿ ಬೃಹತ್ ಪ್ರಮಾಣದಲ್ಲಿ ದೇಣಿಗೆ ಸ್ವೀಕಾರ ಸಮಾರಂಭ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ವೈದ್ಯಕೀಯ ಚಿಕಿತ್ಸೆ ಪಡೆಯಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭಾನುವಾರ ಬೆಳಿಗ್ಗೆ ಅಮೆರಿಕಕ್ಕೆ ತೆರಳಿದರು. ಪತ್ನಿ ಕಮಲಾ ಕೂಡ ಜೊತೆಗಿದ್ದರು.</p>.<p>ಮಿನ್ನೆಸೊಟಾದ ರೊಚ್ಸ್ಟರ್ನಲ್ಲಿರುವ ಮೆಯೊ ಕ್ಲಿನಿಕ್ಗೆ ವಿಜಯನ್ ಅವರು ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ. ಈ ಹಿಂದೆ ನಿಗದಿಯಾದಂತೆ, ಆಗಸ್ಟ್ 19ರಂದೇ ಅವರು ಅಮೆರಿಕಕ್ಕೆ ತೆರಳಬೇಕಿತ್ತು. ಆಗಸ್ಟ್ 8ರಂದು ರಾಜ್ಯದಲ್ಲಿ ಕಾಣಿಸಿಕೊಂಡ ಭೀಕರ ಪ್ರವಾಹದ ಕಾರಣ ಪ್ರವಾಸವನ್ನು 10 ದಿನಗಳ ಕಾಲ ಮುಂದೂಡಿದ್ದರು.</p>.<p>ವಿಜಯನ್ ಅವರು ಮೂರು ವಾರಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆ. ಆದರೆ ಯಾವ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ನೀಡಲು ಸರ್ಕಾರ ನಿರಾಕರಿಸಿದೆ.</p>.<p>ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಸಂಪುಟಕ್ಕೆ ಮರುಸೇರ್ಪಡೆಯಾದ ಸಚಿವ ಇ.ಪಿ.ಜಯರಾಜನ್ ಅವರು ಸಂಪುಟ ಸಭೆ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ದೇಣಿಗೆಯನ್ನು ಸ್ವೀಕರಿಸಲಿದ್ದಾರೆ.</p>.<p>ಕೇರಳ ರಾಜ್ಯಪಾಲ ಪಿ.ಸದಾಶಿವಂ ಅವರನ್ನುಶನಿವಾರ ರಾಜಭವನದಲ್ಲಿ ಭೇಟಿಯಾದ ವಿಜಯನ್ ಅವರು ಪ್ರವಾಸದ ಕುರಿತಂತೆ ಮಾಹಿತಿ ನೀಡಿದರು. ಅಲ್ಲದೇ, ಪ್ರವಾಹಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಲಾದ ಪರಿಹಾರ ಕಾರ್ಯ, ಪುನರ್ ನಿರ್ಮಾಣ ಕೆಲಸಗಳ ಬಗ್ಗೆ ವಿವರಣೆ ನೀಡಿದರು.</p>.<p>ದೇಣಿಗೆ ಸ್ವೀಕಾರ: ಪುನರ್ ನಿರ್ಮಾಣ ಕೈಗೊಳ್ಳಲು ಅನಿವಾಸಿ ಕೇರಳಿಯರಿಂದ ನೆರವು ಪಡೆಯಲು 14 ದೇಶಗಳಲ್ಲಿ ಕಾರ್ಯಕ್ರಮ ನಡೆಸಲು ಕೇರಳ ಸರ್ಕಾರ ಮುಂದಾಗಿದೆ. ಇದಲ್ಲದೇ ಸೆಪ್ಟೆಂಬರ್ 10ರಿಂದ 15ರ ತನಕ ರಾಜ್ಯದ 14 ಜಿಲ್ಲೆಗಳಲ್ಲಿ ಬೃಹತ್ ಪ್ರಮಾಣದಲ್ಲಿ ದೇಣಿಗೆ ಸ್ವೀಕಾರ ಸಮಾರಂಭ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>