ಹೈದರಾಬಾದ್: ಪೆದ್ದಪಲ್ಲಿ ಜಿಲ್ಲೆಯಲ್ಲಿರುವ ಸರ್ಕಾರಿ ಸ್ವಾಮ್ಯದ ಸಿಂಗರೇಣಿ ಕಲ್ಲಿದ್ದಲ್ಲು ಗಣಿಯಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದೊಡ್ಡ ಬಂಡೆಗಳನ್ನು ಒಡೆಯಲು ಆಯಾ ಜಾಗದಲ್ಲಿ ಸ್ಫೋಟಕಗಳನ್ನು ಇಡಲಾಗಿದ್ದು, ಅವು ಸ್ಫೋಟಗೊಂಡು ಕಾರ್ಮಿಕರು ಮೃಪಟ್ಟಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ತನಿಖೆ ನಡೆಸುವುದಾಗಿ ಕಂಪನಿಯ ಮಹಾನಿರ್ದೇಶಕರು ತಿಳಿಸಿದ್ದಾರೆ.