ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಹಗರಣ: ಡಿಸೆಂಬರ್‌ 5ಕ್ಕೆ ಶಿಕ್ಷೆ ಪ್ರಕಟ

Last Updated 3 ಡಿಸೆಂಬರ್ 2018, 13:14 IST
ಅಕ್ಷರ ಗಾತ್ರ

ನವದೆಹಲಿ: ಅಕ್ರಮ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದ ಪ್ರಕರಣಕ್ಕೆ ಸಂಬಂಧಿಸಿ, ಮಾಜಿ ಕೇಂದ್ರ ಕಲ್ಲಿದ್ದಲು ಕಾರ್ಯದರ್ಶಿ ಎಚ್.ಸಿ. ಗುಪ್ತಾ ಸೇರಿದಂತೆ ಐವರ ಶಿಕ್ಷೆಯ ಪ್ರಮಾಣವನ್ನುದೆಹಲಿ ಕೋರ್ಟ್‌ಡಿ.5ರಂದು ಪ್ರಕಟಿಸಲಿದೆ.

ವಿಶೇಷ ನ್ಯಾಯಾಧೀಶಭಾರತ್ ಪರಾಶರ್ ಈ ಪ್ರಕರಣದ ವಿಚಾರಣೆ ನಡೆಸಿದರು. ಆರೋಪಿಗಳಿಗೆ ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಖಾಸಗಿ ಸಂಸ್ಥೆಗೆ ಭಾರಿ ದಂಡ ವಿಧಿಸುವಂತೆಸಿಬಿಐ ಕೋರಿದೆ.

ಗುಪ್ತಾ ಅವರಿಗೆ 70 ವರ್ಷವಾಗಿದ್ದು, ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇವರ ಪಿಂಚಣಿಯೇ ಕುಟುಂಬಕ್ಕೆ ಆಧಾರ ಎಂದು ಗುಪ್ತಾ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.ನ.30ರಂದು ನ್ಯಾಯಾಲಯ ಗುಪ್ತಾ ಅವರು ಸೇರಿದಂತೆಐವರನ್ನುಮತ್ತು ವಿಕಾಸ್‌ ಮೆಟಲ್‌ ಪವರ್‌ ಲಿಮಿಟೆಡ್‌ ಕಂಪೆನಿಯನ್ನು ದೋಷಿ ಎಂದು ತೀರ್ಪು ನೀಡಿತ್ತು.

2012ರಲ್ಲಿಪಶ್ಚಿಮ ಬಂಗಾಳದ ಉತ್ತರ ಮತ್ತು ದಕ್ಷಿಣದ ಮೊಯಿರಾ ಮತ್ತು ಮಧುಜೋರ್‌ ಎಂಬಲ್ಲಿನ ಕಲ್ಲಿದ್ದಲ್ಲು ನಿಕ್ಷೇಪ ಹಂಚಿಕೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT