ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ ಆರೋಪದಲ್ಲಿ ಸದಸ್ಯತ್ವ ಅನರ್ಹಗೊಳಿಸಿದ್ದ ದೆಹಲಿಯ ಆಮ್ ಆದ್ಮಿ ಪಾರ್ಟಿಯ (ಎಎಪಿ) 20 ಶಾಸಕರ ವಿಚಾರಣೆಯನ್ನು ಮುಂದಿನ ತಿಂಗಳು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ಚುನಾವಣಾ ಆಯೋಗ, ಮೇ 17 ರಂದು ಮಧ್ಯಾಹ್ನ 3ಕ್ಕೆ ಖುದ್ದಾಗಿ ಅಥವಾ ತಮ್ಮ ವಕೀಲರ ಮೂಲಕ ‘ಮೌಖಿಕ ವಿಚಾರಣೆ’ಗೆ ಹಾಜರಾಗಬೇಕು ಎಂದು 20 ಶಾಸಕರಿಗೆ ನಿರ್ದೇಶನ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.