ಪ್ರಧಾನಿ ಮೋದಿ ಮಹಾರಾಷ್ಟ್ರದಲ್ಲಿ ಕಳೆದ ತಿಂಗಳು ಮಾಡಿದ್ದ ಎರಡು ಭಾಷಣಗಳು ನೀತಿ ಸಂಹಿತೆ ಉಲ್ಲಂಘನೆ ಎಂದು ದೂರಿ ಕಾಂಗ್ರೆಸ್ ಪಕ್ಷವು ಆಯೋಗಕ್ಕೆ ದೂರು ನೀಡಿತ್ತು. ವಿಚಾರಣೆ ನಡೆಸಿದ ಆಯೋಗ ಪ್ರಧಾನಿಯನ್ನು ಆರೋಪದಿಂದ ಮುಕ್ತಗೊಳಿಸಿತ್ತು. ಚುನಾವಣಾ ಆಯೋಗ ಮೂರು ದಿನಗಳ ಹಿಂದೆ ನಿರ್ಧಾರ ಪ್ರಕಟಿಸಿತ್ತು. ಮೂಲಗಳ ಪ್ರಕಾರ, ಮಹಾರಾಷ್ಟ್ರದ ವಾರ್ಧಾದಲ್ಲಿ ಏ.1ರಂದು ಪ್ರಧಾನಿ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ ತೀರ್ಮಾನಕ್ಕೆ ಒಬ್ಬ ಸದಸ್ಯರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.